Latestಕೆವಿಜಿ ಕ್ಯಾಂಪಸ್‌

ಸುಳ್ಯ: ಕೆವಿಜಿ ಕಾನೂನು ಕಾಲೇಜು, ಕೆಎಸ್ ಎಲ್ ಯು ಆಶ್ರಯದಲ್ಲಿ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾಟ,ಹಲವು ತಂಡಗಳು ಭಾಗಿ,ಇಂದಿನಿಂದ ಸುಳ್ಯದಲ್ಲಿ ಫುಟ್ಬಾಲ್ ಹಬ್ಬ!

388

ನ್ಯೂಸ್ ನಾಟೌಟ್ : ಕುರುಂಜಿಬಾಗ್ ನ ಕೆ.ವಿ.ಜಿ ಮೈದಾನದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳ ವಿಶ್ವವಿದ್ಯಾಲಯ ಮಟ್ಟದ ಫುಟ್ಬಾಲ್ ಪಂದ್ಯಾಟ ಎರಡು ದಿನಗಳ ಕಾಲ ನಡೆಯಲಿದೆ. ಕೆವಿಜಿ ಕಾನೂನು ಮಹಾವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಇಂದು ಮತ್ತು ನಾಳೆ ನೆರವೇರಲಿದೆ.

ಈ ವೇಳೆ ಪಂದ್ಯಾಟದ ಉದ್ಘಾಟನಾ ಸಮಾರಂಭವನ್ನು ಕೆವಿಜಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು A.O.L.E (R), ಸುಳ್ಯ ಇದರ ಅಧ್ಯಕ್ಷರು ಹಾಗೂ KVGMC&H ಇದರ ವೈದ್ಯಕೀಯ ನಿರ್ದೇಶಕರಾದ ಡಾ |ಕೆ.ವಿ ಚಿದಾನಂದ ವಹಿಸಿದ್ದರು.ಬಳಿಕ ಮಾತನಾಡಿದ ಅವರು ” ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿಯೂ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಸೋಲು ಗೆಲುವು ಕ್ರೀಡೆಯ ಒಂದು ಭಾಗ. ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿ ಯೊಂದಿಗೆ ಮುನ್ನಡೆಯಿರಿ ಎಂದು ಪಂದ್ಯಾಟಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿ ಯಾಗಿ ಜಿ.ಎಫ್.ಜಿ.ಸಿ, ಸುಳ್ಯ ಇದರ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ.ಆರ್ ಭಾಗವಹಿಸಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಈ ಸಂದರ್ಭ ವೇದಿಕೆಯಲ್ಲಿ A.O.L.E® ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಹಾಗೂ KVGMCH ಕಾರ್ಯನಿರ್ವಾಹಕ ನಿರ್ದೇಶಕರಾದ ಅಕ್ಷಯ್ ಕೆ ಸಿ, ಕೆವಿಜಿ ಕಾನೂನು ಕಾಲೇಜಿನ ಆಡಳಿತಾಧಿಕಾರಿ ಪ್ರೊ.ಕೆ ವಿ ದಾಮೋದರ ಗೌಡ , ಕಾಲೇಜಿನ ಪ್ರಾಂಶುಪಾಲರಾದ ಡಾ. ಉದಯಕೃಷ್ಣ ಬಿ, ಕಾಲೇಜಿನ ಕ್ರೀಡಾ ಸಂಯೋಜಕಿ, ಉಪನ್ಯಾಸಕಿ ರಶ್ಮಿ ಹೆಚ್, ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ್ ನಾಯ್ಕ್ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.

 

ಸಭಾ ಕಾರ್ಯಕ್ರಮದ ಬಳಿಕ ಫುಟ್ಬಾಲ್ ಪಂದ್ಯಾಟ ನಡೆಯಿತು.ಎಓಎಲ್ಇ ಪ್ರಧಾನ ಕಾರ್ಯದರ್ಶಿ, ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ.ಯವರು ಮೈದಾನದಲ್ಲಿ ಪಂದ್ಯಾಕೂಟಕ್ಕೆ ಚೆಂಡು ಪಾಸ್ ಮಾಡುವ ಮೂಲಕ ಚಾಲನೆ ನೀಡಿದರು.

ಪಂದ್ಯಕೂಟದಲ್ಲಿ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಬೆಳಗಾವಿ, ಮೈಸೂರು, ಉಡುಪಿ, ಪುತ್ತೂರು, ಸುಳ್ಯ ಸೇರಿದಂತೆ ಸುಮಾರು ೧೩ ತಂಡಗಳು ಭಾಗವಹಿಸಿದ್ದು, ಇಂದು ಹಾಗೂ ನಾಳೆ ಸುಳ್ಯದಲ್ಲಿ ಫುಟ್ಬಾಲ್ ಪಂದ್ಯಾಟ ನಡೆಯಲಿದೆ.ಡಾ. ಉದಯ ಕೃಷ್ಣ ಬಿ ಸ್ವಾಗತಿಸಿ ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ಕಾರ್ಯಕ್ರಮ ನಿರೂಪಿಸಿ ಉಪನ್ಯಾಸಕಿ ನಯನ ವಂದಿಸಿದರು.ಸಮಾರೋಪ ಸಮಾರಂಭವು ನಾಳೆ ಸಂಜೆ 3.30ಕ್ಕೆ ಕೆವಿಜಿ ಕ್ರೀಡಾಂಗಣದಲ್ಲಿ ನೆರವೇರಲಿದೆ.

See also  ಸೂಟ್‌ ಕೇಸ್‌ ನಲ್ಲಿ 10 ವರ್ಷದ ಬಾಲಕಿಯ ಶವ ಪತ್ತೆ..! ರೈಲಿನಿಂದ ಸೂಟ್‌ ಕೇಸ್ ಎಸೆದಿರುವ ಶಂಕೆ..!
  Ad Widget   Ad Widget     Ad Widget   Ad Widget   Ad Widget   Ad Widget