ಕರಾವಳಿಸುಳ್ಯ

ಸುಳ್ಯ : ಬಿ.ಸಿ.ಎಂ. ಹಾಸ್ಟೆಲ್ ನಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

ನ್ಯೂಸ್ ನಾಟೌಟ್: ಬಿ. ಸಿ .ಎಂ. ಹಾಸ್ಟೆಲ್ ನಲ್ಲಿ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಸುಳ್ಯ ಕುರುಂಜಿಭಾಗ್ ಸಮೀಪ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಏನಿದು ಘಟನೆ ?

ಸೋನಿಯಾ (18) ಸುಳ್ಯ ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ.ಬೆಂಗಳೂರು ಮೂಲದವಳು. ರಾಮನಾಥ ಪುರದ, ಕಾರಮಂಗಲ ತಾಲೂಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ ಎಂಬವರ ಪುತ್ರಿ. ಸೋನಿಯಾ ಇಂದು ಕಾಲೇಜಿಗೆ ಹೋಗದೇ ಹಾಸ್ಟೇ ಲ್ ನಲ್ಲಿ ಉಳಿದುಕೊಂಡಿದ್ದಳು. ಮಧ್ಯಾಹ್ನ ಆಕೆ ರೂಮಿನಲ್ಲಿದ್ದ ಇನ್ನೊಬ್ಬಳು ವಿದ್ಯಾರ್ಥಿನಿ ಊಟದ ತಟ್ಟೆ ತರಲೆಂದು ರೂಮ್ ಗೆ ಹೋದಾಗ ಬಾಗಿಲು ಹಾಕಿತ್ತು . ಎಷ್ಟು ಬಾಗಿಲು ತಟ್ಟಿದರೂ ಬಾಗಿಲು ತೆಗಿಯಲಿಲ್ಲ, ಸೋನಿಯ ಮಲಗಿರಬಹುದು ಎಂದು ಭಾವಿಸಿದಳು.

ಸ್ವಲ್ಪ ತಡವಾಗಿ ಮತ್ತೆ ಬಾಗಿಲು ಬಡಿದರೂ ತೆಗಿಯದೇ ಇದ್ದ ಕಾರಣ ಸಂಶಯಗೊಂಡ ಆಕೆ ಗೆಳತಿ ವಾರ್ಡನ್ ಗೆ ಮಾಹಿತಿ ನೀಡಿದ್ದಾಳೆ.ಹಾಸ್ಟೆಲ್ ಸಿಬ್ಬಂದಿಗಳು ಬಂದು ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.ಸ್ಥಳಕ್ಕೆ ಪೋಲಿಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸ್ ಐ ದಿಲೀಪ್ ಕುಮಾರ್ ಮೊದಲಾದವರು ಆಗಮಿಸಿದ್ದು ,ವಿದ್ಯಾರ್ಥಿನಿ ಮೃತದೇಹವನ್ನು ಮಹಜರಿಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

Related posts

ಚೈತ್ರ ಕುಂದಾಪುರ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕೋಟಿ ಕೋಟಿ ಮಹಾವಂಚನೆ ಪ್ರಕರಣ, ಪುತ್ತೂರು ಮೂಲದ ವ್ಯಕ್ತಿಯೊಬ್ಬರ ಜತೆ ಸೇರಿ ವಂಚಿಸಿದ್ದ ಆರೋಪಿ ಅರೆಸ್ಟ್..!!

ತಲ್ವಾರ್ ದಾಳಿ ನಡೆದಿಲ್ಲ: ಸುಳ್ಳು ಸುದ್ದಿ ಹಬ್ಬಿಸಿದ ಯುವಕ

ಮಂಗಳೂರು:ಪ್ರೀತಿಸಲು ನಿರಾಕರಿಸಿದ್ದ ಯುವತಿಗೆ 12 ಬಾರೀ ಚೂರಿ ಇರಿತ ಪ್ರಕರಣ,ಆರೋಪಿಗೆ 18 ವರ್ಷ ಸಜೆ, 2 ಲಕ್ಷ ರೂ ದಂಡ