ಕರಾವಳಿಭಕ್ತಿಭಾವ

ಉಡುಪಿ ಪಡುಬಿದ್ರೆಯಲ್ಲೊಂದು ಕಾಂತಾರ ಕಥೆ,ದೈವಸ್ಥಾನ ವಿರುದ್ದ ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿ ಹಠಾತ್ ನಿಧನ

465

ನ್ಯೂಸ್ ನಾಟೌಟ್ : ಜನ ಮೆಚ್ಚಿದ ಸಿನಿಮಾವಾಗಿ ಜಗದಗಲ ವ್ಯಾಪಿಸಿ ಯಶಸ್ಸಿನ ಕಿರೀಟವನ್ನು ಮುಡಿಗೇರಿಸಿಕೊಂಡ ಸಿನಿಮಾ ಕಾಂತಾರ. ರಿಷಭ್ ಶೆಟ್ಟಿ ನಿರ್ದೇಶಿಸಿದ ಸಿನಿಮಾ ಎಲ್ಲ ದಾಖಲೆಗಳ ಮುರಿದು ಇತಿಹಾಸ ಪುಟ ಸೇರಿದೆ. 500 ಕೋಟಿ ರೂ.ಗೆ ಅಧಿಕ ಮೊತ್ತವನ್ನು ಬಾಚಿಕೊಂಡಿದೆ. ದೇಶ , ವಿದೇಶಗಳಲ್ಲೂ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಂತಹ ಸಿನಿಮಾದಲ್ಲಿ ಫೇಮಸ್ ಡೈಲಾಗ್ ಅಂದ್ರೆ ಅದು ‘ ನೀನು ಕೋರ್ಟ್‌ ಗೆ ಹೋಗ್ತಿ, ಅದರ ತೀರ್ಮಾನ ಮೆಟ್ಟಿಲಲ್ಲಿ ನಾನು ಮಾಡುತ್ತೇನೆ ಅನ್ನುವ ದೈವ ನುಡಿ. ಈ ಡೈಲಾಗ್‌ನಲ್ಲಿ ಬಂದ ಸನ್ನಿವೇಶ ಕಾಂತಾರದಲ್ಲಿ ನಾವೆಲ್ಲರೂ ನೋಡಿದ್ದೇವೆ. ಇದೀಗ ಕಾಂತಾರ ಕಥೆಯನ್ನು ಹೋಲುವ ರಿಯಲ್ ಕಥೆ ಉಡುಪಿಯಲ್ಲಿ ನಡೆದಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಏನಿದು ಘಟನೆ ಅನ್ನುವ ಪೂರ್ಣ ಡಿಟೇಲ್ಸ್‌ ಇಲ್ಲಿದೆ ನೋಡಿ.

500 ವರ್ಷ ಇತಿಹಾಸದ ದೈವಸ್ಥಾನ:500 ವರ್ಷ ಇತಿಹಾಸ ಇರುವ ದೈವಸ್ಥಾನದ ವಿರುದ್ಧ ಇದೇ ಮೊದಲ ಬಾರಿ ವ್ಯಕ್ತಿಯೊಬ್ಬ ಕೋರ್ಟ್ ಮೆಟ್ಟಿಲೇರಿದ್ದ. ಕೋರ್ಟ್ ನಿಂದ ತಡೆಯಾಜ್ಞೆ ತಂದ ಮರುದಿನವೇ ಆತ ಕುಸಿದು ಬಿದ್ದು ಸಾವನ್ನಪ್ಪಿದ್ದು ,ದೈವದ ಶಕ್ತಿಗೆ ಊರವರು ತಲೆದೂಗಿದ್ದಾರೆ. ಈ ಘಟನೆ ನಡೆದಿದ್ದು,ಉಡುಪಿ ಜಿಲ್ಲೆಯ ಪಡುಬಿದ್ರಿಯ ಪಡುಹಿತ್ಲು ಜಾರಂದಾಯ ದೈವಸ್ಥಾನದಲ್ಲಿ.

ಅಧಿಕಾರ ಕಳೆದುಕೊಂಡ ಪ್ರಕಾಶ್ ಶೆಟ್ಟಿ:ಪಡುಬಿದ್ರಿಯ ಪಡುಹಿತ್ಲು ಜಾರಂದಾಯ ದೈವಸ್ಥಾನ ಊರ ಸಮಸ್ತರಿಗೆ ಭಕ್ತಿ ಮತ್ತು ನಂಬಿಕೆಯ ಮೂಲವಾಗಿತ್ತು.ವರ್ಷಕ್ಕೊಮ್ಮೆ ಇಲ್ಲಿ ವಿಜೃಂಭಣೆಯ ನೇಮೋತ್ಸವ ನಡೆಯುತ್ತಿತ್ತು.ಊರವರೆಲ್ಲ ಸೇರಿ  ಮಾಡುವ ಈ ಕೋಲಕ್ಕೆ  ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಿದ್ದರು.ಈ ದೈವಸ್ಥಾನ ನೋಡಿಕೊಳ್ಳಲು ಪಡುಹಿತ್ಲು ಜಾರಂದಾಯ ಬಂಟ ಸೇವಾ ಸಮಿತಿ ಇದೆ.ಈ ಸಮಿತಿಯಲ್ಲಿ ಪ್ರಕಾಶ್ ಶೆಟ್ಟಿ ಅಧ್ಯಕ್ಷರಾಗಿದ್ದರು. ಸಮಿತಿ ಬದಲಾದಾಗ ಪ್ರಕಾಶ್ ಶೆಟ್ಟಿ ಸಹಜವಾಗಿ ಅಧಿಕಾರ ಕಳೆದುಕೊಂಡರು.

ಪ್ರತ್ಯೇಕ ಟ್ರಸ್ಟ್ ರಚನೆ:ಅಧಿಕಾರದ ದುರಾಸೆಯಿಂದ ಪ್ರತ್ಯೇಕ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ ,ಇಲ್ಲಿಯ ದೈವಸ್ಥಾನ ಮನೆಯ ಗುರಿಕಾರರಾದ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ.ಹೀಗೆ 5 ಜನರ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ ,ಇದರಲ್ಲಿ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ.ದೈವಸ್ಥಾನ ತಮಗೆ ಸೇರಿದ್ದು ಎಂದು ಹಕ್ಕು ಸ್ಥಾಪಿಸಲು ಯತ್ನಿಸುತ್ತಾರೆ.

ಕೋರ್ಟ್ ಮೆಟ್ಟಿಲೇರಿದ ಪ್ರಕಾಶ್ ಶೆಟ್ಟಿ:ವರ್ಷಂಪ್ರತಿಯಂತೆ ಈ ವರ್ಷ ನೇಮೋತ್ಸವ ನಡೆಸಲು ಜಾರಂದಾಯ ದೈವಸ್ಥಾನ ಸಮಿತಿ ತೀರ್ಮಾನಿಸಿ ,ಜನವರಿ 7 ರಂದು ಕೋಲ ನಡೆಸಲು ತೀರ್ಮಾನಿಸುತ್ತದೆ.ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಜಯಪೂಜಾರಿ ಮತ್ತು ಪ್ರಕಾಶ್ ಶೆಟ್ಟಿ‌ ಕೋಲಕ್ಕೆ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗ್ತಾರೆ.

ಜಯಪೂಜಾರಿ ಹಠಾತ್ ಸಾವು:ಆಶ್ಚರ್ಯದ ಸಂಗತಿ ಎಂದರೆ ಡಿಸೆಂಬರ್ 23 ಕ್ಕೆ ತಡೆಯಾಜ್ಞೆ ತಂದ ಜಯಪೂಜಾರಿ, ಡಿಸೆಂಬರ್ 24 ರಂದು ಹಠಾತ್ ಕುಸಿದು ಬಿದ್ದು ಸಾವನ್ನಪ್ಪುತ್ತಾರೆ. ಸಮೀಪದಲ್ಲಿ ನಡೆಯುತ್ತಿದ್ದ ತಂಬಿಲ ಸೇವೆ ಸಂದರ್ಭ ಎಲ್ಲರೆದುರೇ ಪ್ರಾಣ ಕಳೆದು ಕೊಮಡಿದ್ದು, ಊರ ಜನ ಮೂಕವಿಸ್ಮಿತರಾಗಿದ್ದಾರೆ. ಈ ಪ್ರಕರಣವನ್ನು ಕೈಗೆತ್ತಿಕೊಂಡ ಖ್ಯಾತ ವಕೀಲ ಬಿ.ನಾಗರಾಜ್ ,ತಡೆಯಾಜ್ಞೆಯನ್ನು ವೆಕೇಟ್ ಮಾಡುವಲ್ಲಿ ಯಶಸ್ವಿಯಾಗುತ್ತಾರೆ. ಇಷ್ಟಕ್ಕೂ ಸುಮ್ಮನಿರದ ಟ್ರಸ್ಟಿ ಪ್ರಕಾಶ್ ಶೆಟ್ಟಿ ಬೇರೆ ಬೇರೆ ರೀತಿಯಲ್ಲಿ ಕಿರುಕುಳ ನೀಡುತ್ತಾರೆ.ಕೊನೆಗೆ ಜಾರಂದಾಯ ದೈವಸ್ಥಾನದ ದೈವ ನರ್ತಕ ಭಾಸ್ಕರ ಬಂಗೇರ ಅವರನ್ನು‌ ಬೆದರಿಸಿ ತಾವು ಹೇಳುವ ರೀತಿ ದೈವದ ನುಡಿ ಕೊಡಬೇಕು ಎಂದು ಬೆದರಿಸಿತ್ತಾರೆ.

See also  ಪೆಟ್ಟು ತಡೆಯಲು ಬಂದವನಿಗೆ ಹಿಗ್ಗಾಮುಗ್ಗಾ ಥಳಿತ, ಸಾವು

ವ್ಯಾಪಕ ಆಕ್ರೋಶ:ಜನವರಿ 7 ಕ್ಕೆ ನಡೆಯಬೇಕಿದ್ದ ನೇಮೋತ್ಸವವನ್ನು ದೈವಸ್ಥಾನ‌ ಸಮಿತಿ‌ ಜಯಪೂಜಾರಿ ದೈವಧೀನರಾದ ಕಾರಣಕ್ಕೆ ಮುಂದೂಡಿದೆ.ಆದರೆ ಹಠ ಬಿಡದ ಪ್ರಕಾಶ್ ಶೆಟ್ಟಿ ಮತ್ತು ತಂಡ ಜಯ ಪೂಜಾರಿಯವರ ಉತ್ತರಕ್ರಿಯೆಯ ದಿನವಾದ ಜ.7 ರಂದೇ ಕಾಲಾವಧಿ ನೇಮೋತ್ಸವ ಮಾಡಲು ಹೊರಟಿದೆ. ಕೋರ್ಟ್ ನಲ್ಲಿ ತಡೆಯಾಜ್ಞೆ ತೆರವಾಗಿದ್ದರೂ ಊರವರ ವಿರುದ್ಧ ಹೊರಟಿರುವ ಪ್ರಕಾಶ್ ಶೆಟ್ಟಿ ಮತ್ತು ತಂಡದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೀಗ ಊರ ಸಮಸ್ತರು ಸಭೆ ಸೇರಿ 500 ವರ್ಷಗಳ ಇತಿಹಾಸ ಇರುವ ಜಾರಂದಾಯ ಬಂಟ ಸೇವಾ ಸಮಿತಿ ಮಾಡುವ ನಿರ್ಣಯಕ್ಕೆ ಬದ್ಧ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget