ಕ್ರೈಂವೈರಲ್ ನ್ಯೂಸ್ಶಿಕ್ಷಣ

5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡದ್ದೇಕೆ? ಉಪನ್ಯಾಸಕರು ಮತ್ತು ವಿದ್ಯಾರ್ಥಿನಿ ನಡುವೆ ಅಂತದ್ದೇನಾಯ್ತು?

201

ನ್ಯೂಸ್ ನಾಟೌಟ್ : ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು (Student) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ.
ಮೂಲತಃ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿ, ಹೊನ್ನಶೆಟ್ಟಿಹಳ್ಳಿಯ ಮಾನ್ಯ ಎಂಬ ೧೯ ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಮದು ಗುರುತಿಸಲಾಗಿದೆ.

ಈಕೆ ಹಾಸನ ಹೊರವಲಯದ ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್ ಪದವಿ ಓದುತ್ತಿದ್ದಳು ಎನ್ನಲಾಗಿದೆ. ಇಂದು ಮೊದಲ ಪರೀಕ್ಷೆ ಬರೆದಿದ್ದು, ಪರೀಕ್ಷೆ ಸಮಯದಲ್ಲಿ ನಕಲು ಮಾಡಿದ್ದಾಗಿ ಆರೋಪಿಸಿ ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣೆ ಪತ್ರ ಬರೆದುಕೊಡುವಂತೆ ಉಪನ್ಯಾಸಕರೊಬ್ಬರು ಹೇಳಿದ್ದರು ಎನ್ನಲಾಗಿದೆ.

ಇದಾದ ಬಳಿಕ ವಿದ್ಯಾರ್ಥಿನಿ ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿ ತಿಳಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ಕೊರಗಜ್ಜನಿಗೆ ಸೊಂಟ ಇಲ್ಲದ ತರ ಕುಣಿಸಿ ಆರಾಧಿಸ್ತಾರೆ, ಬರಿ ಸಾರಾಯಿಯನ್ನೇ ಕುಡಿಸ್ತಾರೆ ಎಂದ ಸುಧೀರ್ ಅತ್ತಾವರ..! ಏನಿದು ವಿವಾದ..? ಅಷ್ಟಕ್ಕೂ ‘ಕೊರಗಜ್ಜ’ ಸಿನಿಮಾ ನಿರ್ದೇಶಕ ಹೇಳಿದ್ದೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget