Latestಕರಾವಳಿ

ಸುಬ್ರಹ್ಮಣ್ಯ:ಸುಳ್ಯ ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷರಿಗೆ ವ್ಯಕ್ತಿಯಿಂದ ಹಲ್ಲೆ, ಜೀವ ಬೆದರಿಕೆ!ದೂರು ದಾಖಲು

460

ನ್ಯೂಸ್‌ ನಾಟೌಟ್: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಐನೆಕಿದು ಗ್ರಾಮದ ಕೂಜುಗೋಡು ನಿವಾಸಿ ಸತೀಶ್ ಕೆ.ಪಿ. (54) ಎಂಬುವವರು ಈ ಬಗ್ಗೆ ದೂರು ನೀಡಿದ್ದಾರೆ.

ಏನಿದು ಘಟನೆ?

ಮೇ 6ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು,ಸುಳ್ಯ ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷರಾಗಿದ್ದ ಸತೀಶ್ ಕೂಜುಗೋಡು  ಎಂಬವರಿಗೆ ಮಿಥುನ್ ಕೂಜುಗೋಡು  ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಸತೀಶ್ ಅವರು ಸುಬ್ರಹ್ಮಣ್ಯದಿಂದ ತನ್ನ ಮನೆಗೆ ರಾತ್ರಿ ಹೋಗುತ್ತಿದ್ದರು. ಈ ವೇಳೆಯಲ್ಲಿ ಐನೆಕಿದು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ತಲುಪುತ್ತಿದ್ದಂತೆ, ಹಿಂದಿನಿಂದ ಅವರ ಕಾರನ್ನು ಬಿಳಿ ಬಣ್ಣದ ಕಾರಿನಲ್ಲಿ ಸತೀಶ್ ಅವರ ಅಣ್ಣನ ಮಗ ಮಿಥುನ್ ಓವರ್‌ಟೇಕ್‌ ಮಾಡಿದ್ದಾರೆ. ಬಳಿಕ ಸತೀಶ್ ಅವರ ಕಾರನ್ನು ಅಡ್ಡಗಟ್ಟಿ ನಿಲ್ಲಿಸಿ, ಅವ್ಯಾಚ  ಪದಗಳಿಂದ ಬೈದು, ಸುಬ್ರಹ್ಮಣ್ಯದಲ್ಲಿರುವ ನನ್ನ ಬಿಲ್ಡಿಂಗ್ ಕಟ್ಟಡದ ನಿರ್ಮಾಣಕ್ಕೆ ತೊಂದರೆ ಮಾಡುತ್ತೀಯಾ ಎಂದು ಪ್ರಶ್ನಿಸಿದ್ದಾರೆ. ಇದಾದ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ವೇಳೆ ಸತೀಶ್ ಅವರು ಜೋರಾಗಿ ಕಿರುಚಿದ್ದು, ಆರೋಪಿ ಮಿಥುನ್ ಅವರು ಸತೀಶ್ ಅವರಿಗೆ ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಯಿಂದ ಗಾಯಗೊಂಡ ಸತೀಶ್ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

See also  ಬಂಟ್ವಾಳ: ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ; ಅಪಘಾತದ ರಭಸಕ್ಕೆ ಯುವತಿ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟು ಸಾವು
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget