ಕರಾವಳಿಸುಳ್ಯ

ಸುಬ್ರಹ್ಮಣ್ಯ:ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು,ಎರಡು ಕಾರು ಜಖಂ

187

ನ್ಯೂಸ್ ನಾಟೌಟ್: ನಿನ್ನೆ ರಾತ್ರಿ ವೇಳೆ ಗುಡುಗು ಸಹಿತ ಗಾಳಿ ಮಳೆಗೆ ಮರಗಳು ಉರುಳಿ ಎರಡು ಕಾರುಗಳ ಮೇಲೆ ಬಿದ್ದ ಪರಿಣಾಮ ಕಾರುಗಳು ಜಖಂಗೊಂಡ ಘಟನೆ ವರದಿಯಾಗಿದೆ.ಕಡಬ ತಾಲೂಕಿನ ನೆಟ್ಟಣ ಸಮೀಪ ಈ ಘಟನೆ ನಡೆದಿದೆ.

ನೆಟ್ಟಣದ ಕೇಂದ್ರೀಯ ಮರ ಸಂಗ್ರಹಣ ಘಟಕದ ಬಳಿ ಈ ಘಟನೆ ಸಂಭವಿಸಿದೆ. ಭಾರೀ ಗಾಳಿಗೆ ಹೆದ್ದಾರಿ ಬದಿಯ ದೂಪದ ಹಲವು ಮರಗಳು ರಸ್ತೆಗೆ ಬಿದ್ದಿವೆ. ಈ ವೇಳೆ ಸಂಚರಿಸುತ್ತಿದ್ದ ನ್ಯಾನೋ ಹಾಗೂ ಓಮ್ನಿ ಕಾರುಗಳ ಮೇಲೆ ಮರ ಬಿದ್ದಿದೆ ಎಂದು ತಿಳಿದುಬಂದಿದೆ.ಘಟನೆಯಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

ಮರ ಕಾರಿನ ಮೇಲ್ಛಾವಣಿಗೆ ಬಿದ್ದು ಸಿಲುಕಿಕೊಂಡಿದೆ. ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

See also  ಅಳಕೆ ಮಜಲು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಆರಂಭಕ್ಕೆ ಕ್ರಮ, ಶಿಕ್ಷಣ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget