ಕ್ರೈಂವೈರಲ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ: ಆಂಜನೇಯನ ದೇವಸ್ಥಾನಕ್ಕೆ ಕನ್ನ ಹಾಕಿದವನ ಅರೆಸ್ಟ್, ಆತ ಪೊಲೀಸರ ಬಲೆಗೆ ಬಿದ್ದಿದ್ದೇಗೆ..? ಸಿಸಿಟಿವಿ ದೃಶ್ಯ ಇಲ್ಲಿದೆ ವೀಕ್ಷಿಸಿ

163

ನ್ಯೂಸ್ ನಾಟೌಟ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ ಅಭಯ ಆಂಜನೇಯ ಗುಡಿಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಬ್ರಹ್ಮಣ್ಯ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಅಭಯ ಆಂಜನೇಯ ಗುಡಿಯ ಅರ್ಚಕರು ನ.3ರಂದು ರಾತ್ರಿ ದೇವಸ್ಥಾನದ ಪೂಜಾಕಾರ್ಯ ಮುಗಿಸಿ ಬಾಗಿಲು ಹಾಕಿ ತೆರಳಿದ್ದರು. ನ.4ರಂದು ಬೆಳಗ್ಗೆ ದೇವಸ್ಥಾನಕ್ಕೆ ಬಂದು ನೋಡಿದಾಗ ದೇವಸ್ಥಾನದ ಪೂಜಾ ಸಾಮಾಗ್ರಿಗಳು, ಕಳವಾಗಿರುವುದು ಗೊತ್ತಾಗಿದೆ. ಕಳವು ಆದ ಸ್ವತ್ತುಗಳ ಮೌಲ್ಯ ಸುಮಾರು ₹ 10 ಸಾವಿರ ಎಂದು ಅಂದಾಜಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ನೀಡಿದ್ದರು, ಇದೀಗ ಕಳ್ಳನ ಚಲನವಲನದ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗುತ್ತಿವೆ.

See also  ಅರಂತೋಡು: ಸ್ಕೂಲ್ ಬಸ್ ಅಡಿಗೆ ಬಿದ್ದು ಆರು ವರ್ಷದ ಬಾಲಕಿ ಮೃತ್ಯು ಪ್ರಕರಣ! ಶಿಕ್ಷೆ ಪ್ರಕಟಿಸಿದ ಕೋರ್ಟ್!
  Ad Widget   Ad Widget     Ad Widget   Ad Widget   Ad Widget   Ad Widget