ಕರಾವಳಿಬೆಂಗಳೂರುರಾಜಕೀಯ

ನಟ ಕಿಚ್ಚ ಸುದೀಪ್ ಅವರಿಂದ ಚುನಾವಣಾ ಪ್ರಚಾರ,ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ‌ ಜತೆಗೆ ರೋಡ್ ಶೋನಲ್ಲಿ ಭಾಗಿ

249

ನ್ಯೂಸ್ ನಾಟೌಟ್ : ಚುನಾವಣಾ ಕಾವು ರಂಗೇರುತ್ತಿದೆ.ಎಲ್ಲಾ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾವೆ.ಅದರಲ್ಲೂ ಸ್ಟಾರ್ ಪ್ರಚಾರಕರು ಎಂಟ್ರಿಯಾಗಿದ್ದು ಭಾರಿ ಕುತೂಹಲ ಮೂಡಿಸುವಂತೆ ಮಾಡಿದೆ.

ಇದರ ಮಧ್ಯೆ ಕಿಚ್ಚ ಸುದೀಪ್ ಅವರು ರಾಜಕೀಯಕ್ಕೆ ಪ್ರವೇಶ ಮಾಡುತ್ತಾರೆ ಎನ್ನುವ ಸುದ್ದಿಯಿತ್ತು.ನಂತರದ ದಿನಗಳಲ್ಲಿ ಕಿಚ್ಚ ಸುದೀಪ್ ಅವರು ಸಿ.ಎಂ.ಬೊಮ್ಮಾಯಿ ಜತೆ ಕಾಣಿಸಿಕೊಂಡಿದ್ದ ಸುದ್ದಿ ಭಾರಿ ಸದ್ದು ಮಾಡಿತ್ತು.ಖ್ಯಾತ ನಟ ಕಿಚ್ಚ ಸುದೀಪ್ ಅವರು ತಮ್ಮ ನೆಚ್ಚಿನ ‘ಮಾಮ’ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪ್ರತಿನಿಧಿಸುವ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದಿಂದ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಸಿಎಂ ಬೊಮ್ಮಾಯಿ‌ ಇಂದು ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಭರ್ಜರಿ ರೋಡ್ ಶೋ ನಡೆಯುತ್ತಿದೆ. ಈ ಕಾರ್ಯಕ್ರಮಗಳಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪಾಲ್ಗೊಂಡು ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ. ಶಿಗ್ಗಾಂವಿಗೆ ತೆರಳುವ ಮುನ್ನ ಕಿಚ್ಚ ಸುದೀಪ್ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಿಕೆ ಹೊಸದೇನಲ್ಲ‌. ಹಿಂದೆಯೂ ಅನೇಕ ಸ್ನೇಹಿತರ ಪರವಾಗಿ ಪ್ರಚಾರ ಮಾಡಿದ್ದೆ ಎಂದಿದ್ದಾರೆ.

ಪ್ರತಿ ಬಾರಿ ಚುನಾವಣೆಯಲ್ಲಿ ಪ್ರಚಾರ ಮಾಡಲು ಆಹ್ವಾನಿಸುತ್ತಾರೆ. ಈ ಸಲ ಬಿಜೆಪಿ ಆಯ್ಕೆ ಮಾಡಿಕೊಂಡಿದ್ದೇನೆ ಎಂದಿರುವ ಅವರು,ಮೇ 7ರವರೆಗೆ ಪ್ರಚಾರದಲ್ಲಿ ಭಾಗವಹಿಸಲು ಯೋಚಿಸಿದ್ದೇನೆ ಎಂದರು. ಸಿಎಂ ಬೊಮ್ಮಾಯಿ‌ ಅವರು ಸೂಚಿಸಿದ ಕೆಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿಚ್ಛಿಸುತ್ತೇನೆ ಎಂದು ನಟ ಸುದೀಪ್ ಪ್ರತಿಕ್ರಿಯಿಸಿದರು.

See also  ಅಡ್ಕಾರು: ಹೆಂಡತಿಗೆ ಚೂರಿಯಿಂದ ಕುತ್ತಿ ಗಂಡ ಪರಾರಿ, ರಕ್ತ ಸೋರುತ್ತಲೇ ಆಸ್ಪತ್ರೆಗೆ ಧಾವಿಸಿದ ಮಹಿಳೆಗೆ ಆಗಿದ್ದೇನು..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget