ಸುಳ್ಯ

ಸುಳ್ಯ: ಸಹಾಯಕ ಕೃಷಿ ನಿರ್ದೇಶಕ ನಾಗರಾಜ್ ವರ್ಗಾವಣೆ, ಕೃಷಿ ಇಲಾಖೆ ವತಿಯಿಂದ ಬೀಳ್ಕೊಡುಗೆ

ನ್ಯೂಸ್ ನಾಟೌಟ್: ಸುಳ್ಯದಲ್ಲಿ ಕಳೆದೊಂದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷಿ ಅಧಿಕಾರಿ ಹಾಗೂ ಪ್ರಭಾರ ಸಹಾಯಕ ಕೃಷಿ ನಿರ್ದೇಶಕ ನಾಗರಾಜ್ ವರ್ಗಾವಣೆಗೊಂಡಿದ್ದಾರೆ.

ಹಾವೇರಿಯ ಕಾಗಿನೆಲೆ ರೈತ ಸಂಪರ್ಕ ಕೇಂದ್ರಕ್ಕೆ ವರ್ಗಾವಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಸುಳ್ಯದ ಕೃಷಿ ಇಲಾಖೆಗೆ ಇಂಚಾರ್ಜ್ ಆಗಿ ಎಸ್ ಎಸ್ ಮಂಜುನಾಥ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ನಾಗರಾಜ್ ಬನ್ನಿ ಹಟ್ಟಿ ರವರಿಗೆ ಸುಳ್ಯ ಕೃಷಿ ಇಲಾಖೆ ಬೀಳ್ಕೋಡುಗೆ ಕಾರ್ಯಕ್ರಮ ನಡೆಯಿತು.

ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ , ಉಪ ಕೃಷಿ ನಿರ್ದೇಶಕ ಶಿವಶಂಕರ್ , ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕ ರಮೇಶ್ , ಕಚೇರಿ ಅಧೀಕ್ಷಕಿ ಗೀತಾ, ದ್ವಿತೀಯ ದರ್ಜೆ ಸಹಾಯಕಿ ವನ ಮಾಲ, ನಿವೃತ್ತ ಕೃಷಿ ಅಧಿಕಾರಿ ಮೋಹನ್ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ವಿಷಕಾರಿ ಜಂತು ಕಚ್ಚಿ ಕಾಲನ್ನೇ ಕಳೆದುಕೊಂಡ ವ್ಯಕ್ತಿಗೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ನೆರವು

ಸುಳ್ಯ: ಎನ್.ಎಂ.ಸಿ ಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕಲ್ಮಡ್ಕ: ಕಾಚಿಲ ಶ್ರೀಮಹಾವಿಷ್ಣುಮೂರ್ತಿ ದೈವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಒತ್ತೆಕೋಲ ನಡಾವಳಿ, ಸಾವಿರಾರು ಜನ ಸೇರುವ ನಿರೀಕ್ಷೆ