ಕರಾವಳಿರಾಜಕೀಯಸುಳ್ಯ

ಸುಳ್ಯ ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಮುರುಳ್ಯ ಉಮೇದುವಾರಿಕೆ ಸಲ್ಲಿಕೆ

258

ಸುಳ್ಯದ ಶ್ರೀರಾಮ್‌ ಪೇಟೆಯಿಂದ ಅದ್ಧೂರಿ ರೋಡ್‌ ಶೋ

ನ್ಯೂಸ್‌ನಾಟೌಟ್‌: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಮುರುಳ್ಯ ಸುಳ್ಯದ ಶ್ರೀರಾಮ್‌ ಪೇಟೆಯಿಂದ ಅದ್ಧೂರಿಯಾಗಿ ರೋಡ್‌ ಶೋ ಮೂಲಕ ತೆರಳಿ ಸುಳ್ಯ ಮಿನಿ ವಿಧಾನಸೌಧ ದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ರೋಡ್‌ ಶೋಗೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಚಾಲನೆ ನೀಡಿದರು. ಸಚಿವ ಅಂಗಾರ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್‌ ಕಂಜಿಪಿಲಿ ಸೇರಿದಂತೆ ಬಿಜೆಪಿಯ ಪ್ರಮುಖರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತಂದರು. ರೋಡ್‌ ಶೋ ಪ್ರಯುಕ್ತ ಪುತ್ತೂರು ವಿಭಾಗದ ಡಿವೈಎಸ್‌ಪಿ ಡಾ. ವೀರಯ್ಯ ಹಿರೇಮಠ ಉಪಸ್ಥಿತಿಯಲ್ಲಿ ಸುಳ್ಯ ಪೇಟೆಯಾದ್ಯಂತ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು.

ಈ ಬಾರಿ ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಸ್ಥಾನಕ್ಕೆ ಹೊಸ ಮುಖ ಪರಿಚಯವಾಗಿದ್ದು, ಭಾಗೀರಥಿ ಮುರುಳ್ಯ ಅವರಿಗೆ ಮಣೆ ಹಾಕಿದೆ. ಈ ಹಿನ್ನೆಲೆಯಲ್ಲಿ ಹಾಲಿ ಸಚಿವರು ಮತ್ತು ಹಾಲಿ ಶಾಸಕರಾದ ಎಸ್.ಅಂಗಾರ ಅವರಿಗೆ ಟಿಕೆಟ್ ಮಿಸ್ ಆಗಿತ್ತು. ಕರಾವಳಿ ಭಾಗದಲ್ಲಿ ಎಸ್‌ ಅಂಗಾರ ಅವರು ಪ್ರಮುಖರು ಎನಿಸಿಕೊಂಡಿದ್ದರು. ಅವರ ಜಾಗಕ್ಕೆ ಇದೀಗ ಮಹಿಳೆಯೊಬ್ಬರಿಗೆ ಬಿಜೆಪಿ ಅವಕಾಶ ನೀಡಿದೆ. ಕಳೆದ ಹಲವಾರು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಭಾಗೀರಥಿ ಮುರುಳ್ಯ ಅವರಿಗೆ ಸುಳ್ಯದಲ್ಲಿ ಟಿಕೆಟ್ ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಸುಳ್ಯ ವಿಧಾನಸಭಾ ಚುನಾವಣೆಗೆ ಮಾತ್ರ ಹೊಸ ಮುಖವನ್ನು ಪರಿಚಯಿಸಲಾಗಿದೆ.

See also  ಕೆವಿಜಿ ಮೆಡಿಕಲ್ ಕಾಲೇಜ್ : ಡಾ.ಪ್ರಮೋದ್ ಪೂಜಾರ್ ಗೆ ಅತ್ಯುತ್ತಮ ಪೋಸ್ಟರ್ ಪ್ರಸ್ತುತಿ ಅವಾರ್ಡ್
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget