ಕರಾವಳಿ

ಸುಳ್ಯ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ, 4 ನೇ ದಿನದ ಕಾರ್ಯಾಚರಣೆ ವೇಳೆ ಪೆರಾಜೆ ಬಳಿ ಸಿಕ್ಕಿದ ಶವ

ನ್ಯೂಸ್ ನಾಟೌಟ್: ಕಾಲು ಸಂಕದಿಂದ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಪೆರಾಜೆಯ ನೆಡ್ಚಿಲ್ ಸಮೀಪದ ಕಣಿ ಎಂಬಲ್ಲಿ ಮೃತ ದೇಹ ಸಿಕ್ಕಿದೆ ಎಂದು ತಿಳಿದು ಬಂದಿದೆ. ಮೂರು ದಿವಸದಿಂದ ಕಾರ್ಯಾಚರಣೆ ಮಾಡುತ್ತಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇದೀಗ ನಾಲ್ಕನೇ ದಿವಸದ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆಯಾಗಿದೆ.

ಅಗ್ನಿಶಾಮಕ ದಳ, ಎಸ್‌ಡಿಆಎರ್‌ ಎಫ್‌ ತಂಡ, ಅಗ್ನಿಶಾಮಕ ದಳ ಸುಳ್ಯ, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿ, SKSSF ಅರಂತೋಡು ಕಲ್ಲುಗುಂಡಿ ವಿಖಾಯ ತಂಡ, ಕಂದಾಯ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯತ್ ಸಿಬ್ಬಂದಿ, ಸುಳ್ಯ-ಪೆರಾಜೆಯ ಮುಳುಗು ತಜ್ಞರಿಂದ ಕಾರ್ಯಾಚರಣೆ ನಡೆದಿತ್ತು.

Related posts

ಕಬಡ್ಡಿ ಆಟಗಾರನ ಬಲಿ ಪಡೆದುಕೊಂಡ ಲೋನ್ ಆ್ಯಪ್..! ಮಗುವಿನ ಫೋಟೋ ಬಳಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿತೇ ಕಿರಾತಕ ಸಂಸ್ಥೆ..?

ಸುಳ್ಯ:ವಿದ್ಯಾರ್ಥಿಗಳ ಪ್ರವಾಸದಿಂದುಳಿದ ನಗದನ್ನೇ ದೋಚಿದ ಖದೀಮರು..!,ಶಾಲೆಯ ಬೀಗ ಮುರಿದು ಒಳಪ್ರವೇಶಿಸಿ ಕೃತ್ಯ, ಕಳ್ಳರು ದೋಚಿಕೊಂಡು ಹೋದ ಹಣವೆಷ್ಟು?

ಮಂಗಳೂರು: ನೋಡನೋಡುತ್ತಿದ್ದಂತೆ ಕುಸಿದು ಬಿದ್ದ ಬಾವಿ, ಕೃಷಿಯನ್ನೇ ನಂಬಿದ ರೈತನಿಗೆ ಈಗ ಬದುಕೇ ಬಲುಭಾರ..!