ಕರಾವಳಿಸುಳ್ಯ

ಸುಳ್ಯ:ಕಾರ್ಯಕ್ರಮವೊಂದರಲ್ಲಿ ಪಟಾಕಿ ಸಿಡಿಸುತ್ತಿರುವ ವೇಳೆ ದುರಂತ..!ಕೈಯಲ್ಲೇ ಪಟಾಕಿ ಸಿಡಿದು ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯ

148

ನ್ಯೂಸ್‌ ನಾಟೌಟ್‌ : ತನ್ನ ಕೈಯ್ಯಲ್ಲಿದ್ದ ಪಟಾಕಿ ಸ್ಪೋಟಗೊಂಡ ಪರಿಣಾಮ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಸುಳ್ಯದಿಂದ ವರದಿಯಾಗಿದೆ.ಸುಳ್ಯದ ಕನಕಮಜಲು ಎಂಬಲ್ಲಿ ಭಜನಾ ಕಾರ್ಯಕ್ರಮ ಜರುಗುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಪಟಾಕಿಯನ್ನು ಸಿಡಿಸುತ್ತಿರುವ ವೇಳೆ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಇಂದು( ಫೆ.20ರಂದು) ಬೆಳಿಗ್ಗೆ ಈ ಘಟನೆ ನಡೆದಿದ್ದು, ಕನಕಮಜಲು ಗ್ರಾಮದ ಗಬ್ಬಲಡ್ಕ ಪುರುಷೋತ್ತಮ ನಾಯ್ಕರ ಮಗ ಚಂದ್ರಶೇಖರ ಗಬ್ಬಲಡ್ಕ ಎಂಬುವವರು ಪಟಾಕಿಯೊಂದನ್ನು ಸಿಡಿಸುತ್ತಿದ್ದರು.ಈ ವೇಳೆಗಾಗಲೇ ಕೈಯ್ಯಲ್ಲಿರುವ ಪಟಾಕಿ ಏಕಾಏಕಿ ಸಿಡಿದ ಪರಿಣಾಮ ಗಂಭೀರವಾಗಿ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ವಿಷಯ ತಿಳಿದು ಹತ್ತಾರು ಸ್ಥಳೀಯರು ಸ್ಥಳಕ್ಕಾಗಮಿಸಿದರು.ತಕ್ಷಣ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತು.ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

See also  ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ತುರ್ತು ಭೂಸ್ಪರ್ಶ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget