ನ್ಯೂಸ್ ನಾಟೌಟ್: ಸುಳ್ಯ ಸರ್ಕಾರಿ ಆಸ್ಪತ್ರೆ ‘ಡಿ’ ಗ್ರೂಪ್ ನೌಕರರ ವೇತನ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಸ್ಯಾಲರಿ ಇನ್ನೂ ಸಿಕ್ಕಿಲ್ಲ, ಮನೆಯಲ್ಲಿ ತುಂಬಾ ಕಷ್ಟ ಇದೆ. ನಮ್ಮ ಕುಟುಂಬವನ್ನು ರಕ್ಷಿಸಿ ಎಂದು ಜೂ.18ರಂದು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ ವೇಳೆ ಸಿಬ್ಬಂದಿ ಮನವಿ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ನಿಮ್ಮ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತೇನೆ, ಶಾಶ್ವತ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನೆರಡು ದಿನಗಳಲ್ಲಿ ಎಲ್ಲ ಸಮಸ್ಯೆಗಳು ಕೂಡ ಬಗೆ ಹರಿಯಲಿದೆ’ ಎಂದು ಭರವಸೆ ನೀಡಿದರು.
ಈ ವೇಳೆ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಎಂ ಶಹೀದ್ ಸೇರಿದಂತೆ ಹಲವಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.