ಕರಾವಳಿ

ಬಿರುಕುಬಿಟ್ಟ ಸುಳ್ಯದ ಗುಡ್ಡಕ್ಕೆ ತಜ್ಞರ ಭೇಟಿ

ನ್ಯೂಸ್ ನಾಟೌಟ್: ಬಿರುಕು ಬಿಟ್ಟು ಜನರ ಆತಂಕಕ್ಕೆ ಕಾರಣವಾಗಿರುವ ಸುಳ್ಯದ ಗುಳಿಕ್ಕಾನ ಪ್ರದೇಶಕ್ಕೆ ತಜ್ಞರ ತಂಡ ಆಗಮಿಸಿದೆ. 2018 ರಲ್ಲಿ ಗುಳಿಕ್ಕಾನದ ಗುಡ್ಡದಲ್ಲಿ 200 ಮೀಟರ್ ದೂರದವರೆಗೆ ಭೂಮಿ ಆಳವಾಗಿ ಭಾಗ ಬಿಟ್ಟಿತು. ಈ ವೇಳೆ ಗುಳಿಕ್ಕಾನದ ಗುಡ್ಡ ಭಾಗದಲ್ಲಿ 10 ಕುಟುಂಬಗಳು ವಾಸಿಸುತ್ತಿದ್ದವು. ಸದ್ಯ ಈ ಗುಡ್ಡ ಜನ ವಾಸಕ್ಕೆ ಯೋಗ್ಯವೇ ಎಂಬುದನ್ನು ಪರಿಶೀಲನೆ ನಡೆಸುವುದಕ್ಕೆ ತಂಡ ಆಗಮಿಸಿದೆ.

ಸುಳ್ಯದ ಗುಳಿಕ್ಕಾನ ಪ್ರದೇಶ ಜನ ವಾಸಿಸಲು ಯೊಗ್ಯವಾಗಿದೆಯೇ ಎಂದು ತಿಳಿಯಲು ಅದ್ಯಯನ ತಂಡ ಆಗಮಿಸಿ ಪರಿಶೀಲನೆ ನಡೆಸಿ  ಅದ್ಯಯನ ವರದಿ ಸರ್ಕಾರಕ್ಕೆ ಸಲ್ಲಿಸಲಿದೆ. ಜಿಯಾಲಾಜಿಕಲ್ ಸರ್ವಿಸ್ ಆಪ್ ಇಂಡಿಯಾ ಮಿನಿಸ್ಟರಿ ಮೈನ್ಸ್ ಆಪ್ ಇಂಡಿಯಾದ ಹಿರಿಯ ಜಿಯಾಲಾಜಿಸ್ಟ್ ಅಫೀಸರ್ ಐಜಾದ್ ಅಹಮದ್ ಭಟ್, ಹಿರಿಯ ಜಿಯಾಲಾಜಿಸ್ಟ್ ಜಿ ಎಸ್ ಐ ಸೆಂಥಿಲ್ ಕುಮಾರ್ ಸುಕೋಚ್,  ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಂಗಳೂರು ಉಪ ನಿರ್ದೇಶಕ ಲಿಂಗರಾಜ್ ಬಿ ಎಂ ಹಾಗೂ ಭೂ ವಿಜ್ಞಾನಿ ಶ್ರೀಮತಿ ಡಾ।ಸುಷ್ಮಾಶಶಿ ಇದ್ದರು. ಉಪ ತಹಶಿಲ್ದಾರ್ ಚಂದ್ರಕಾಂತ್ ಎಂ ಆರ್, ಆರ್ ಐ ಶಂಕರ್, ಕೊಲ್ಲಮೊಗ್ರು ಗ್ರಾ.ಪಂ ಪಿಡಿಒ ರವಿಚಂದ್ರ, ಕೊಲ್ಲಮೊಗ್ರು ಗ್ರಾಮ ಲೆಕ್ಕಾಧಿಕಾರಿ ಮಧು ಕೆ ಬಿ, ಸಹಾಯಕ ಯತಿನ್, ಗ್ರಾ.ಪಂ ಸಿಬ್ಬಂದಿ ಸಂತೋಷ್, ಸ್ಥಳೀಯ ಜನ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು. ಗುಡ್ಡ ಬಿರುಕು ಬಿಟ್ಟ ಹೊರತಾಗಿಯೂ ಅಲ್ಲಿ ಈಗಲೂ ಮನೆಯವರು ವಾಸವಾಗಿದ್ದಾರೆ. ಸ್ಥಳಾಂತರಿಸಲು ಪ್ರಕ್ರಿಯೆ ಆರಂಭವಾಗಿ ನಾಲ್ಕು ವರ್ಷಗಳಾದರೂ ಈ ವರೆಗೆ ಸಾದ್ಯವಾಗಿಲ್ಲ.

Related posts

ಯುವಕನ ಬೆತ್ತಲೆ ಮಾಡಿ ಬ್ಲ್ಯಾಕ್ ಮೈಲ್ ಮಾಡಿದ ಮಹಿಳೆ

ಉರಿಬೇಸಿಗೆಯಲ್ಲಿ ಕರೆಂಟ್ ಬಿಲ್ ದುಬಾರಿಯಾಗುತ್ತಿದೆಯಾ? ಸರ್ಕಾರದ ಈ ಯೋಜನೆಯಲ್ಲಿ ಸಿಗಲಿದೆ ಉಚಿತ ವಿದ್ಯುತ್

ಸುಳ್ಯದ ಹೆಸರಾಂತ ವಸ್ತ್ರಮಳಿಗೆ ಕುಂ..ಕುಂ.. ಫ್ಯಾಶನ್ ನಲ್ಲಿ ಬಿಗ್ ಸೇಲ್ ಆಫರ್ ..! ಸ್ಕ್ರಾಚ್ ಕಾರ್ಡ್ ನಲ್ಲಿ ಗೆದ್ದವರಿಗೆ ಬಹುಮಾನ ಹಸ್ತಾಂತರ;ಗ್ರಾಹಕರಿಗೆ ಸುವರ್ಣಾವಕಾಶ..!ಮುಂದಿನ ವರ್ಷ ನಡೆಯುವ ಸುಳ್ಯ ಜಾತ್ರೆಯವರೆಗೂ ಆಫರ್ ಮುಂದುವರಿಕೆ