ಕರಾವಳಿ

ಸುಳ್ಯ: ತಾಲೂಕು ಸಾಹಿತ್ಯ ಸಮ್ಮೇಳನದ ಟೀ ಶರ್ಟ್ ಬಿಡುಗಡೆ

ನ್ಯೂಸ್ ನಾಟೌಟ್ : ಸುಳ್ಯ ತಾಲೂಕು ೨೬ ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಸ್ವಾಗತ ಸಮಿತಿ ಅಧ್ಯಕ್ಷ ಉಮ್ಮರ್ ಬೀಜದಕಟ್ಟೆ ನೇತೃತ್ವದಲ್ಲಿ ಶನಿವಾರ ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಟೀ ಶರ್ಟ್ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಉಮ್ಮರ್‌, ಸಂಪಾಜೆ ,ಗೂನಡ್ಕ, ಸುಳ್ಯ ತಾಲೂಕಿನ ಹಲವು ಭಾಗಗಳು ಸರಣಿ ಭೂಕಂಪದಿಂದ ಭಯಭೀತರಾಗಿದ್ದಾರೆ. ಇಂತಹ ಸಂರ್ಭದಲ್ಲಿ ಕರುನಾಡ ಜನತೆಗೆ ಭೂಕಂಪ, ಜಲ, ನೆಲ , ನುಡಿಗಳನ್ನು ಜನರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಬೇಕಾಗಿದೆ. ಅಲ್ಲದೆ ಜನರಿಗೆ ಭಾಷೆ , ಸಂಸ್ಕೃತಿ , ಸಾಹಿತ್ಯದ ಮೂಲಕ ಕನ್ನಡದ ಅರಿವನ್ನು ಮೂಡಿಸಿ ಧೈರ್ಯ ತುಂಬಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ಪ್ರಧಾನ ಕಾರ್ಯದರ್ಶಿ ತೇಜಸ್ವಿ ಕಡಪಳ,

ದಾಮೋದರ ಮಾಸ್ಟರ್ , ಲತಾಶ್ರೀ, ದಯಾನಂದ , ಕೇಶವ ಮಾಸ್ಟರ್, ಚಂದ್ರಮತಿ , ಟಿಎಂ.ಶಹೀದ್‌, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ ಹಮೀದ್ ಉಪಸ್ಥಿತರಿದ್ದರು.

Related posts

ಮೂಲ್ಕಿ:ತುಳುವಿನಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ:ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಜನಸಾಗರ

ಮಂಗಳೂರು: ತಲಪಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ..! ಓರ್ವ ಅರೆಸ್ಟ್..!

ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ..! ಕಳೆದ ವರ್ಷ 132 ಜನರಿಗೆ ಬಾಧಿಸಿದ್ದ ಖಾಯಿಲೆ 4 ಜನರನ್ನು ಬಲಿ ಪಡೆದಿತ್ತು..!