ಕೆವಿಜಿ ಕ್ಯಾಂಪಸ್‌ಸುಳ್ಯ

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಆಯುರ್ವೇದ ಸಪ್ತಾಹದ ಎರಡನೇ ದಿನದ ಕಾರ್ಯಕ್ರಮ, ಮಾಹಿತಿ ಕಾರ್ಯಾಗಾರ

171

ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಯುರ್ವೇದ ಸಪ್ತಾಹ ಕಾರ್ಯಕ್ರಮದ ಎರಡನೆಯ ದಿನವಾದ ಮಂಗಳವಾರ (ಅ. 22) ಕಾಲೇಜಿನ ಆಡಿಟೋರಿಯಂನಲ್ಲಿ “ಪರಿಸರ ರಕ್ಷಣೆ ಹಾಗೂ ಸಸ್ಯ ಹಾಗೂ ಪ್ರಾಣಿಗಳ ಯೋಗಕ್ಷೇಮದಲ್ಲಿ ಆಯುರ್ವೇದ ಪಾತ್ರ” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಸುಳ್ಯದ ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್, ಮಹಿಳಾ ಸಮಾಜ, ಮಹಿಳಾ ಒಕ್ಕೂಟ, ರೋಟರಿ ಸಿಟಿ ಸುಳ್ಯ ಹಾಗೂ ಕಾಲೇಜಿನ ಎನ್ ಎಸ್ ಎಸ್ ಘಟಕದ ಸಹಯೋಗದಿಂದ ಕಾರ್ಯಕ್ರಮ ಆಯೋಜಿಸಲಾಯಿತು.

ಮಾಹಿತಿ ಕಾರ್ಯಾಗಾರವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಅಗದ ತಂತ್ರ ವಿಭಾಗದ ಮುಖ್ಯಸ್ಥ ಡಾ. ಅವಿನಾಶ್ ಕೆ.ವಿ. ನಡೆಸಿಕೊಟ್ಟರು. ಲಯನ್ಸ್ ಕ್ಲಬ್ ಸುಳ್ಯದ ಅಧ್ಯಕ್ಷ ರಾಮಕೃಷ್ಣ ರೈ, ರೋಟರಿ ಕ್ಲಬ್ ಸುಳ್ಯದ ಅಧ್ಯಕ್ಷ ಯೋಗಿತಾ ಗೋಪಿನಾಥ್, ಇನ್ನರ್ ವೀಲ್ ಕ್ಲಬ್ ಸುಳ್ಯದ ಅಧ್ಯಕ್ಷ ಚಿಂತನ ಸುಬ್ರಮಣ್ಯ, ಮಹಿಳಾ ಸಮಾಜ ಸುಳ್ಯದ ಅಧ್ಯಕ್ಷ ಪುಷ್ಪಾ ಮಾಣಿಬೆಟ್ಟು, ಮಹಿಳಾ ಒಕ್ಕೂಟ ಸುಳ್ಯ ಹಾಗೂ ಎಂ. ಬಿ. ಫೌಂಡೇಶನ್ ಸುಳ್ಯದ ಹರಿಣಿ ಸದಾಶಿವ, ರೋಟರಿ ಸುಳ್ಯ ಸಿಟಿಯ ಅಧ್ಯಕ್ಷ ಶಿವಪ್ರಸಾದ್ , ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಸಂಘಗಳ ಸದಸ್ಯರು, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ, ಎನ್ ಎಸ್ ಎಸ್ ಘಟಕದ ಮುಖ್ಯಸ್ಥೆ ಡಾ. ಪ್ರಮೋದಾ ಪಿ.ಎ., ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಕಿರಿಯ ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧಾರ್ ಡಿ.ವಿ. ಪ್ರಾಸ್ತಾವಿಕ ಮಾತನಾಡಿದರು. ಮಹಿಳಾ ಒಕ್ಕೂಟದ ಅಧ್ಯಕ್ಷೆ ಹರಿಣಿ ಸದಾಶಿವ ಅವರು ಆಯುರ್ವೇದದ ಉಪಯೋಗದಿಂದ ತಮ್ಮ ಜೀವನದಲ್ಲಿ ಲಭಿಸಿದ ಪ್ರಯೋಜನಗಳು ಹಾಗೂ ಪರಿಸರ ರಕ್ಷಣೆಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳಾದ ಚಿತ್ಕಲ ಭಾರಧ್ವಾಜ್ ಹಾಗೂ ಅಶ್ವಿನಿ ಪ್ರಾರ್ಥಿಸಿದರು. ವಿದ್ಯಾರ್ಥಿಗಳಾದ ಯಶಸ್ವಿನಿ ಹಾಗೂ ಲಕ್ಷ್ಮಿ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

See also  ಮದೆನಾಡು: ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸರಿಂದ ತಾಲೀಮು..! ಬೆಟ್ಟ-ಗುಡ್ಡ ಹತ್ತಿ ಇಳಿದು ಭರ್ಜರಿ ಸಾಹಸ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget