Latestಕೆವಿಜಿ ಕ್ಯಾಂಪಸ್‌

ಸುಳ್ಯ: ರಾಷ್ಟ್ರೀಯ ಮಟ್ಟದ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಹುಮಾನ

626

ನ್ಯೂಸ್ ನಾಟೌಟ್ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಉಡುಪಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ದ್ವಿತೀಯ ಬಿ.ಎ.ಎಂ.ಎಸ್ ನ ಐಶ್ವರ್ಯ ಸುಭಾಷ್ ರಾಯ್ಕರ್ ಮತ್ತು ಬೃಂದಾ ಆಚಾರ್ಯ ಅವರು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಪ್ರಶಸ್ತಿ ವಿಜೇತ ವಿದ್ಯಾರ್ಥಿನಿಯರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ರಿಜಿಸ್ಟರ್ ಸುಳ್ಯ ಇದರ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಪ್ರಧಾನ ಕಾರ್ಯದರ್ಶಿ ಅರ್ಕಿಟೆಕ್ಟ್ ಅಕ್ಷಯ್ ಕೆ ಸಿ, ಉಪಾಧ್ಯಕ್ಷೆ ಶೋಭಾ ಚಿದಾನಂದ, ಕಾರ್ಯದರ್ಶಿ ಡಾ. ಐಶ್ವರ್ಯ ಕೆ.ಸಿ., ಜೊತೆ ಕಾರ್ಯದರ್ಶಿ ಕೆ. ವಿ. ಹೇಮನಾಥ, ಕೋಶಾಧಿಕಾರಿ ಗೌತಮ್ ಗೌಡ, ಕೌನ್ಸಿಲ್ ಮೆಂಬರ್ಸ್ ಗಳಾದ ಜಗದೀಶ್ ಅಡ್ತಲೆ, ಮೀನಾಕ್ಷಿ ಕೆ.ಹೆಚ್, ಧನಂಜಯ ಮದುವೆಗದ್ದೆ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ. ಅಭಿನಂದಿಸಿದ್ದಾರೆ.

See also  ಮಂಗಳೂರು: ಮನೆಯ ಅವಶೇಷಗಳಡಿಯಿಂದ ತಾಯಿ, ಮಗುವಿನ ಮಾತು, ಅಳು ಕೇಳಿಸುತ್ತಿದೆ ಎಂದ ರಕ್ಷಣಾ ಸಿಬ್ಬಂದಿ..! ಇನ್ನೋರ್ವ ಮಹಿಳೆ ಸಾವು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget