ನ್ಯೂಸ್ ನಾಟೌಟ್: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತೆಯಲ್ಲಿ ವಿಶೇಷ ಕಾನೂನು ಜಾಗೃತಿ ಕಾರ್ಯಕ್ರಮ ಫೆ. 18 ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸರಸ್ವತಿ ಭಾಗವಹಿಸಿ ಮಾಹಿತಿ ನೀಡಿದರು. ಮಾದಕ ವಸ್ತುಗಳ ಬಳಕೆ ತುಂಬಾ ಅಪಾಯಕಾರಿ. ವಿದ್ಯಾರ್ಥಿಗಳು ಮಾದಕ ವ್ಯಸನ ಹಾಗೂ ಇತ್ಯಾದಿ ಯಾವುದೇ ದುಷ್ಚಟಗಳಿಗೆ ಬಲಿಯಾಗಬಾರದು ಎಂದರು.
ಈ ವೇಳೆ ಗಾಂಜಾ ಮತ್ತಿತರ ಮಾದಕ ಪದಾರ್ಥಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಜೊತೆಗೆ ಸೈಬರ್ ಅಪರಾಧ, ಪೋಕ್ಸೋ ಕಾಯ್ದೆ ಹಾಗೂ ವಿದ್ಯಾರ್ಥಿಗಳು ರಸ್ತೆ ಸಂಚಾರಿ ನಿಯಮಗಳನ್ನು ಸರಿಯಾಗಿ ಅರಿತುಕೊಂಡು ಅದನ್ನು ಪಾಲಿಸುವಂತೆ ಅರಿವು ಮೂಡಿಸಿದರು.
ವೇದಿಕೆಯಲ್ಲಿ ಕಾಲೇಜಿನ ಡೀನ್ ಡಾ.ನೀಲಾಂಬಿಕೈ ನಟರಾಜನ್, ಕಮ್ಯುನಿಟಿ ಮೆಡಿಸಿನ್ ವಿಭಾಗ ಮುಖ್ಯಸ್ಥರಾದ ಡಾ ದಿನೇಶ್ ಪಿ.ವಿ, ಕಾಲೇಜಿನ ರಿಜಿಸ್ಟ್ರಾರ್ ಸಂದೇಶ್. ಕೆ, ಸೀನಿಯರ್ ಆಫೀಸ್ ಸೂಪರಿಂಟೆಂಡೆಂಟ್ ದಿನೇಶ್ ಕುಮಾರ್ ಎ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.