ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ ಅಂತಾರಾಷ್ಟ್ರೀ ಯ ಗ್ರಾಹಕರ ದಿನಾಚರಣೆಯ ಅಂಗವಾಗಿ ಶನಿವಾರ (ಮಾರ್ಚ್ 15 ) ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾನೂನು ಕಾಲೇಜಿನ ಆಡಳಿತಧಿಕಾರಿ ಪ್ರೊ. ಕೆ ವಿ ದಾಮೋದರ ಗೌಡ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ದಳ ಸುಬ್ರಯ ಭಟ್ ಗ್ರಾಹಕರ ಹಿತರಕ್ಷಣ ಕಾಯ್ದೆಗಳ ಪ್ರಕಾರ ಗ್ರಾಹರ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾoಶುಪಾಲ ಡಾ. ಉದಯಕೃಷ್ಣ ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ಉಪನ್ಯಾಸಕಿ ಉಷಾ ಸಿ. ಶೆಟ್ಟಿ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಆಶಿಕಾ, ಹಂಸಿನಿ, ಪೂರ್ಣಿಮಾ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಕೃಷ್ಣವೇಣಿ ಸ್ವಾಗತಿಸಿ ದರ್ಶಿನಿ ವಂದಿಸಿದರು. ವಿದ್ಯಾರ್ಥಿನಿ ಅನುಷ್ಯ ಕಾರ್ಯಕ್ರಮ ನಿರೂಪಿಸಿದರು.