ನ್ಯೂಸ್ ನಾಟೌಟ್ : ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ಇಂದು (ಜೂನ್ 05) 35 ನೇ ವರ್ಷದ ಕಾಲೇಜು ವಾರ್ಷಿಕೋತ್ಸವ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯದ ಅಧ್ಯಕ್ಷರಾದ ಡಾ ಕೆ.ವಿ ಚಿದಾನಂದ ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗುವುದರೊಂದಿಗೆ ಉದ್ಘಾಟಿಸಲಾಯಿತು.
ಬಳಿಕ ಮಾತನಾಡಿದ ಅವರು, ‘ಕಾನೂನು ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಫುಳ ಅವಕಾಶಗಳಿವೆ. ಆದರೆ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳುವಲ್ಲಿ ಯಾವಾಗಲು ಹೆಚ್ಚು ನಿರತರಾಗಬೇಕು. ಅದಕ್ಕಾಗಿ ಅತಿ ಹೆಚ್ಚು ಗ್ರಂಥಾಲಯಗಳನ್ನು ಉಪಯೋಗಿಸಿಕೊಳ್ಳಿ, ಪುಸ್ತಕಗಳನ್ನು ಓದಿ, ಕಂಪ್ಯೂಟರ್ ಜ್ಞಾನವನ್ನು ಹೆಚ್ಚಿಸಿಕೊಳ್ಳಿ’ ಎಂದು ಕರೆ ನೀಡಿದರು. ನ್ಯಾಯಾಲಯಗಳಲ್ಲಿ ಉತ್ತಮ ಹುದ್ದೆಗಳನ್ನು ಅಲಂಕರಿಸಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮೇಜರ್ ಡಾ.ಕುಶ್ವಂತ್ ಕೊಳಿಬೈಲು ಭಾಗವಹಿಸಿ, ‘ಜಗತ್ತು ತಾಂತ್ರಿಕವಾಗಿ ತುಂಬಾ ಮುಂದುವರೆದಿದೆ ಅದಕ್ಕೆ ತಕ್ಕಂತೆ ನಾವು ಬದಲಾಗಬೇಕು. ಹೊಸ ಹೊಸ ವಿಚಾರಳನ್ನು ನಿರಂತವಾಗಿ ಕಲಿಯುತ್ತಿರಬೇಕು. ಹಾಗಿದ್ದಲ್ಲಿ ಮಾತ್ರ ನಾವು ಯಾವುದೇ ಕ್ಷೇತ್ರದಲ್ಲಾದರೂ ಮಿಂಚಬಹುದು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಗೌರವ ಅತಿಥಿಗಳ ನೆಲೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ. ವಿ ದಾಮೋದರ ಗೌಡ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಟೀನಾ ಹೆಚ್ ಎಸ್, ವಿದ್ಯಾರ್ಥಿ ಸಂಘದ ನಾಯಕ ಮುಶ್ರಫ್ ಅಹಮ್ಮದ್, ಕಾರ್ಯದರ್ಶಿ ಮಾನಸ.ಎಮ್, ಉಪಕಾರ್ಯದರ್ಶಿ ಸುಷ್ಮಾಂಜಲಿ ಸಿ.ಯು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಟೀನಾ ಹೆಚ್ ಎಸ್ ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ಮಾನಸ ಎಮ್ ವಿದ್ಯಾರ್ಥಿ ಸಂಘದ ಕಾರ್ಯ ಚಟುವಟಿಕೆಗಳ ವರದಿ ತಿಳಿಸಿದರು. ಬಳಿಕ ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.
ರಮ್ಯಾ ಮತ್ತು ಬಳಗ ಪ್ರಾರ್ಥಿಸಿದರು. ಉಪನ್ಯಾಸಕರಾದ ಕಲಾವತಿ ಸ್ವಾಗತಿಸಿದರು, ಶರ್ಮಿಳಾ ಬಿ ರೈ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕರಾದ ರಚನಾ ಕೆ ಹಾಗೂ ನಯನ ಪಿ ಯು ಕಾರ್ಯಕ್ರಮ ನಿರೂಪಿಸಿದರು. ಮುಶ್ರಫ್ ಅಹಮ್ಮದ್ ಧನ್ಯವಾದಗೈದರು. ಈ ಸಂಧರ್ಭ ಎಲ್ಲಾ ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯತೆ ನಡೆಯಿತು.
ಶೌಚ ಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು..! ತಂದೆ, ಮಗಳು, ಅಳಿಯನ ದುರಂತ ಅಂತ್ಯ..!