Latestಕರಾವಳಿಸುಳ್ಯ

ಸುಳ್ಯ : ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು;ಮಂಗಳೂರು ಆಸ್ಪತ್ರೆಯಲ್ಲಿ ಫಲಿಸದ ಚಿಕಿತ್ಸೆ

723

ನ್ಯೂಸ್‌ ನಾಟೌಟ್: ಮಾವಿನ ಮಿಡಿ ಕೊಯ್ಯಲೆಂದು ಮರಕ್ಕೆ ಹತ್ತಿದ್ದ ವೇಳೆ ಬಿದ್ದು ತೀವ್ರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಬಗ್ಗೆ ಸುಳ್ಯದಿಂದ ವರದಿಯಾಗಿದೆ. ಸುಳ್ಯದ ಉಬರಡ್ಕದ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿ(೫೨) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಅವರು ಮಾ.೨೨ರಂದು ಕೆಲಸಕ್ಕೆಂದು ತೆರಳಿದ್ದರು. ಆಗ ಮಾವಿನ ಮರವೇರಿ ಮಾವಿನಮಿಡಿ ಕೊಯ್ಯುತ್ತಿದ್ದರು. ಈ ವೇಳೆ ತಾನು ನಿಂತಿದ್ದ ಗೆಲ್ಲು ತುಂಡಾಗಿ ಬಿದ್ದಿದ್ದು ಅದರೊಂದಿಗೆ ಇವರು ಕೂಡ ಕೆಳಕ್ಕೆ ಬೀಳಲ್ಪಟ್ಟರು.ಈ ವೇಳೆ ಸೊಂಟ ಹಾಗೂ ತಲೆಗೆ ಗಾಯವಾಗಿರೋದು ಗೊತ್ತಾಗಿ ಕೂಡಲೇ ಅವರನ್ನು ಸಮೀಪದ ಸುಳ್ಯ ಆಸ್ಪತ್ರೆಗೆ ಕರೆತರಲಾಯಿತು.ಆದರೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದದ್ದರಿಂದ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.ನಾಲ್ಕು ದಿನಗಳ ಕಾಲ ಚಿಕಿತ್ಸೆ ಮುಂದುವರಿದಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಜನಾರ್ದನ ಪೂಜಾರಿಯವರು ಮಾ.೨೬ರಂದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

 

 

 

 

View this post on Instagram

 

A post shared by News not out (@newsnotout)

See also  ಸುಳ್ಯ ದಸರಾ ಸಂಭ್ರಮಕ್ಕೆ ದಿನಗಣನೆ; ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡರಿಗೆ ಸುಳ್ಯ ದಸರಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget