ಕ್ರೈಂವೈರಲ್ ನ್ಯೂಸ್ಸುಳ್ಯ

ಸುಳ್ಯ: ಕೆಲಸಕ್ಕೆಂದು ಬಂದವ ಮೊಬೈಲ್ ಮತ್ತು ಬೈಕ್‌ ಕದ್ದು ಪರಾರಿ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಕೆಲಸ ಕೇಳಿಕೊಂಡು ಬಂದಾತ ಮೊಬೈಲ್‌, ಬೈಕ್‌ ಕಳವು ಮಾಡಿ ಪರಾರಿಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಬರಾಯದ ರಿಯಾಜ್‌ ಸುಳ್ಯ ಠಾಣೆಗೆ ದೂರು ನೀಡಿದ್ದು, ರಿಯಾಜ್‌ ಅರಂತೋಡಿನ ಹೊಟೇಲ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.

ಅವರಲ್ಲಿಗೆ ಅವರ ಪರಿಚಯದ ಹರ್ಷಿಕೇಶ್‌ ಕೆಲಸ ಕೇಳಿದ್ದು, ಅದರಂತೆ ಆತನನ್ನು ರಿಯಾಜ್‌ ಹೊಟೇಲ್‌ಗೆ ಕರೆದುಕೊಂಡು ಹೋಗಿದ್ದು, ಮಧ್ಯಾಹ್ನ ರಿಯಾಜ್‌ ವಿಶ್ರಾಂತಿ ಪಡೆದು ಎದ್ದು ನೋಡಿದಾಗ ಹರ್ಷಿಕೇಶ್‌ ರೂಂನಲ್ಲಿ ಕಾಣಿಸದೇ ಇದ್ದು, ಜತೆಗೆ ರಿಯಾಜ್‌ ಮೊಬೈಲ್‌(14 ಸಾವಿರ ರೂ. ಮೌಲ್ಯ) ಹಾಗೂ ಮೋಟಾರ್‌ ಸೈಕಲ್‌ (60 ಸಾವಿರ ರೂ. ಮೌಲ್ಯ) ಕಳವು ಮಾಡಿಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸುಳ್ಯ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಗಂಡನನ್ನು ಬಿಟ್ಟು ಫೊಟೋಗ್ರಾಫರ್ ಜೊತೆ ಲಿವ್ ಇನ್ ರಿಲೇಶನ್‌..! ಸಂಗಾತಿಯನ್ನೇ ಚುಚ್ಚಿ ಕೊಂದ ಮೇಕಪ್ ಕಲಾವಿದೆ..!

ಕೈಯಲ್ಲಿ ಖಡ್ಗ ಹಿಡಿದು ರಾಣಿಯಂತೆ ಫೋಸ್ ಕೊಟ್ಟ IPS ಡಿ.ರೂಪಾ, ಲಾಠಿ ಹಿಡಿದ ಕೈಯಲ್ಲಿ ಕತ್ತಿ ಹಿಡಿದು ಅಚ್ಚರಿ ಮೂಡಿಸಿದ ಐಪಿಎಸ್ ಅಧಿಕಾರಿಣಿ

ಲಾಡ್ಜ್ ನಲ್ಲಿ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ