ಶಿಕ್ಷಣಸುಳ್ಯ

ಸುಳ್ಯ: ನೆಹರು ಮೆಮೋರಿಯಲ್‌ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ, ಪ್ರತಿಜ್ಞಾ ವಿಧಿ ಬೋಧನೆ

146

ನ್ಯೂಸ್‌ ನಾಟೌಟ್‌: ನೆಹರು ಮೆಮೋರಿಯಲ್‌ ಕಾಲೇಜು ಸುಳ್ಯ ಇದರ ಐಕ್ಯುಎಸಿ ಮತ್ತು ವ್ಯವಹಾರ ಆಡಳಿತ ವಿಭಾಗ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಏಕತಾ ದಿನವನ್ನು ಇಂದು(ಅ.31) ಆಚರಿಸಲಾಯಿತು.

ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಜನ್ಮದಿನಾಚರಣೆಯ ಸ್ಮರಣಾರ್ಥ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ರುದ್ರಕುಮಾರ್‌ ಎಂ.ಎಂ ವಹಿಸಿದ್ದರು.

ಏಕತಾ ದಿನಾಚರಣೆಯ ಸಂದೇಶಗಳ ಆಧಾರದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ, ರಾಷ್ಟ್ರೀಯ ಏಕತಾ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ “ಕೊಲಾಜ್”‌ ತಯಾರಿಕಾ ಸ್ಪರ್ಧೆಯ ಬಹುಮಾನ ವಿತರಣೆಸಲಾಯಿತು.

ರಾಷ್ಟ್ರೀಯ ಏಕತಾ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಡಾ. ಮಮತಾ ಕೆ, ಐಕ್ಯುಎಸಿ ಸಂಯೋಜಕಿ ಬೋಧಿಸಿದರು. ಅನಂತಲಕ್ಷ್ಮಿ, ವಿಭಾಗ ಮುಖ್ಯಸ್ಥರು, ವ್ಯವಹಾರ ಆಡಳಿತ ವಿಭಾಗ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ಏಕತಾ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರತ್ನಾವತಿ ಡಿ. ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ಬೋಧಕ/ಬೋಧಕೇತರ ವೃಂದ ಮತ್ತು ವಿದ್ಯಾರ್ಥಿ ಸಮೂಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಲೀನಾ ಉಪನ್ಯಾಸಕಿ ವ್ಯವಹಾರ ಆಡಳಿತ ವಿಭಾಗ, ಕಾರ್ಯಕ್ರಮಕ್ಕೆ ವಂದಿಸಿದರು.

See also  ಸುಳ್ಯ: ಆಟೋ ರಿಕ್ಷಾದಿಂದ ಹೊರಗೆಳೆದು ಯುವಕನಿಗೆ ಹಿಗ್ಗಾಮುಗ್ಗಾ ಹಲ್ಲೆ..! ಆಸ್ಪತ್ರೆಗೆ ದಾಖಲಾದ ಯುವಕ, ಪೊಲೀಸ್ ಠಾಣೆಯಲ್ಲಿ ದೂರು ದಾಖಲು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget