ಕೆವಿಜಿ ಕ್ಯಾಂಪಸ್‌ಸುಳ್ಯ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆ ಉದ್ಘಾಟನೆ

154

ನ್ಯೂಸ್ ನಾಟೌಟ್ : ರೆಡ್‌ಕ್ರಾಸ್ ಸಂಸ್ಥೆ ಬಹಳಷ್ಟು ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದು, ಅದರ ಧ್ಯೇಯೋದ್ದೇಶ ಅರಿತು ಸೇವಾ ಮನೋಭಾವದೊಂದಿಗೆ ಪ್ರಾಮಾಣಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಆ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಎಂದು ಸುಳ್ಯದ ಪ್ರಭಾರ ತಹಶೀಲ್ದಾರ್‌ ಮಂಜುನಾಥ್ ಎಂ. ಅಭಿಪ್ರಾಯಪಟ್ಟರು.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಹಮ್ಮಿಕೊಂಡ ಯುವ ರೆಡ್‌ಕ್ರಾಸ್ ಘಟಕದ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಕಾರ್ಯದರ್ಶಿ ಹೇಮನಾಥ್ ಕೆ.ವಿ. ಮಾತನಾಡಿ, ಮಾನವನ ದುರಾಸೆಯಿಂದಲೇ ಇಂದು ಬಹಳಷ್ಟು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಯುವ ಜನತೆ ಅಂತ ಕೆಟ್ಟ ಚಟುವಟಿಕೆಗಳಿಂದ ಮುಕ್ತಿಹೊಂದಿ ಸುಖ ಜೀವನ ಕಟ್ಟಿಕೊಳ್ಳಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ., ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲ್, ಪೊಲೀಸ್ ಕಾನ್ ಸ್ಟೇಬಲ್‌ಗಳಾದ ಜ್ಯೋತಿ ಕೆವಿ ಹಾಗೂ ದಿನೇಶ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕ ಮಾತನಾಡಿ, ರೆಡ್‌ಕ್ರಾಸ್ ಘಟಕವನ್ನು ಮತ್ತೆ ಕಟ್ಟುವಲ್ಲಿ ಎಲ್ಲರ ಸಹಕಾರ ಕೋರಿ ಘಟಕದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ದೊರೆಯುವ ಮಾಹಿತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಉಪನ್ಯಾಸಕ ಸಂಜೀವ ಕುದ್ಪಾಜೆ, ಯುವ ರೆಡ್‌ಕ್ರಾಸ್ ಘಟಕದ ನಾಯಕ ಷಣ್ಮುಖ ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಸದಸ್ಯರಾದ ಸುಶ್ಮಿತಾ, ಸ್ಪಂದನಾ, ದೀಪಾ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಘಟಕ ನಾಯಕಿ ದೀಕ್ಷಾ ಎನ್ ಆರ್ ಸ್ವಾಗತಿಸಿ, ಸದಸ್ಯರಾದ ಪವನ್ ವಂದಿಸಿ, ರಿಷಿತಾ ಎ. ಕಾರ್ಯಕ್ರಮ ನಿರೂಪಿಸಿದರು.

See also  ಕಲ್ಲಪಳ್ಳಿಯ ಅಹಲ್ಯ ರಂಗತ್ತಮಲೆ ಡಿಸ್ಟಿಂಕ್ಷನ್ ನಲ್ಲಿ ಪಾಸ್, ಆಳ್ವಾಸ್ ವಿದ್ಯಾರ್ಥಿನಿಯ ಪ್ರಯತ್ನಕ್ಕೊಲಿದ ಯಶಸ್ಸು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget