ಕರಾವಳಿಶಿಕ್ಷಣ

ಸುಳ್ಯ: ಎನ್ನೆoಪಿಯುಸಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

148

ನ್ಯೂಸ್ ನಾಟೌಟ್: ಜೀವನದಲ್ಲಿ ಸಾಧನೆ ಮಾಡಬೇಕು ಎನ್ನುವ ಛಲ ವಿದ್ಯಾರ್ಥಿಗಳಿಗೆ ಎಳವೆಯಲ್ಲಿ ಬರಬೇಕು. ಓದಿನ ಕಡೆಗೆ ಸ್ಪಷ್ಟ ಗುರಿ, ಕಲಿಯುವ ಹಂಬಲ, ಆತ್ಮವಿಶ್ವಾಸ ಜತೆಗಿರಬೇಕು. ಇದಕ್ಕೆ ಹೆತ್ತವರು, ಉಪನ್ಯಾಸಕರು ಸದಾ ಮಾರ್ಗದರ್ಶನ, ಬೆಂಬಲ ನೀಡಬೇಕು ಎಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಹೇಳಿದರು.

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ಶನಿವಾರ (ಜೂ. 1)ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಮಿಥಾಲಿ ಪಿ. ರೈ ಮಾತನಾಡಿ, ವಿದ್ಯೆಯ ಮಹತ್ವ, ಸ್ಥಾಪಕಾಧ್ಯಕ್ಷರಾದ ಕೆ.ವಿ.ಜಿಯವರು ಶಿಕ್ಷಣಕ್ಕೆ ನೀಡಿದ ಕೊಡುಗೆ,ವಿದ್ಯಾರ್ಥಿಗಳು ಅನುಸರಿಸಬೇಕಾದ ನೀತಿ -ನಿಯಮಗಳ ಕುರಿತು ವಿವರಿಸಿದರು.

ವಿದ್ಯಾರ್ಥಿನಿಯರಾದ ಆಜ್ಞ ಮತ್ತು ಬಳಗದವರು ಆಶಯ ಗೀತೆ ಹಾಡಿದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಸಾವಿತ್ರಿ ಕೆ. ಸ್ವಾಗತಿಸಿ, ಜೀವಶಾಸ್ತ್ರ ಉಪನ್ಯಾಸಕಿ ವಿನುತ ಕೆ.ಎನ್. ವಂದಿಸಿದರು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ. ನಿರೂಪಿಸಿದರು. ಉಪನ್ಯಾಸಕರು ಹೆಸರು, ಬೋಧಿಸುವ ವಿಷಯದ ಕುರಿತು ತಿಳಿಸಿದರು. ಈ ಸಂದರ್ಭ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಹೆತ್ತವರು, ವಿದ್ಯಾರ್ಥಿಗಳು, ಉಪನ್ಯಾಸಕರು, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

See also  ಜೇಸಿಐ ಸುಳ್ಯ ಸಿಟಿ ಘಟಕದ ಪದಗ್ರಹಣ ಸಮಾರಂಭ -2025,ಜೇಸಿಐ ಪ್ರಜ್ಞಾವಂತ ಯುವಸಮುದಾಯವನ್ನು ಸೃಷ್ಟಿಸುವ ಸಂಸ್ಥೆ - ಡಾ.ಚಂದ್ರಶೇಖರ್ ದಾಮ್ಲೆ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget