ಸುಳ್ಯ: ಸುಳ್ಯ ಪ್ರೆಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮೇ10ರಂದು ಸಂಜೆ ಸುಳ್ಯದ ಅಂಬಟೆಡ್ಕದಲ್ಲಿರುವ ಪ್ರೆಸ್ ಕ್ಲಬ್ ಮುಂಭಾಗದ ಆವರಣದಲ್ಲಿ ನಡೆಯಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಅವರು ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಪ್ರಧಾನ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಖಜಾಂಚಿ ಈಶ್ವರ್ ವಾರಣಾಸಿ, ಉಪಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸೇರಿದಂತೆ ಕ್ಲಬ್ ನ ಎಲ್ಲ ನಿರ್ದೇಶಕರು ಹಾಗೂ ಸದಸ್ಯರಿಗೆ ಐಡಿ ಕಾರ್ಡ್ ಹಸ್ತಾಂತರಿಸಿದರು.
ಈ ವೇಳೆ ಪ್ರೆಸ್ ಕ್ಲಬ್ ಸುಳ್ಯದ ಗೌರಾವಾಧ್ಯಕ್ಷ ಹರೀಶ್ ಬಂಟ್ವಾಳ್ , ಸುಳ್ಯ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹಾಜಿ ಕೆ.ಎಂ. ಮುಸ್ತಫಾ, ಉದ್ಯಮಿ ಶಶಿಕಲಾ ಕುಂಭಕ್ಕೋಡು, ಕೋಟಕಲ್ ಆಯುರ್ ವೈದ್ಯ ಶಾಲೆಯ ಪ್ರಶಾಂತ್ ಕೋಟಕಲ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಇದೇ ವೇಳೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ಪತ್ರಕರ್ತರ ಮಕ್ಕಳನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ನಡೆಯಿತು.