ನ್ಯೂಸ್ ನಾಟೌಟ್ : ಕೆವಿ ಜಿ ಕಾನೂನು ಕಾಲೇಜಿನಲ್ಲಿ ಉಪನ್ಯಾಸ ಮಾಲಿಕೆಯ ಅಂಗವಾಗಿ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆಯ ಕೋಶದ ಅಡಿಯಲ್ಲಿ ” ಭಾರತದ ಕಾರ್ಮಿಕ ಶಾಸನದ ಅಡಿಯಲ್ಲಿ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಅದರ ಪ್ರಸ್ತುತತೆ ” ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಏಪ್ರಿಲ್ 04 ಶುಕ್ರವಾರದಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾoಶುಪಾಲಡಾ. ಉದಯಕೃಷ್ಣ ಬಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ . ರೇಖಾ ಕೆ “ಕಾರ್ಮಿಕರ ಸಾಮಾಜಿಕ ಭದ್ರತೆಯ ಅಗತ್ಯತೆ, ಮಹತ್ವ ಮತ್ತು ಪ್ರಸ್ತುತತೆ ” ಕುರಿತು ಸವಿಸ್ತಾರವಾದ ಮಾಹಿತಿ ನೀಡಿದರು. ಕಾರ್ಯಕ್ರಮದ ಸಂಯೋಜಕಿ ಉಪನ್ಯಾಸಕಿ ಶರ್ಮಿಳಾ ಬಿ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕು. ಕೀರ್ತನ ಬೇಬಿ ಸ್ವಾಗತಿಸಿ, ಸುಮನ್ ಕುಮಾರ್ ಟಿ ಎಸ್ ವಂದಿಸಿದರು. ಕು. ಕೃಷ್ಣವೇಣಿ ಇ ವಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಭೋದಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.