Latestಕರಾವಳಿಸುಳ್ಯ

ಸುಳ್ಯ:ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ‘ವಿಶ್ವ ಕ್ಷಯರೋಗ ದಿನಾಚರಣೆ’ಯ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

395

ನ್ಯೂಸ್ ನಾಟೌಟ್ :ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶ್ವಾಸಕೋಶ ವಿಭಾಗ ಹಾಗೂ ದಕ್ಷಿಣ ಕನ್ನಡದ ಡಿ.ಟಿ.ಒ. ಸಹಯೋಗದೊಂದಿಗೆ ಏಪ್ರಿಲ್ 03 ಗುರುವಾರದಂದು ವಿಶೇಷ ಉಪನ್ಯಾಸ ಕಾರ್ಯಕ್ರಮ ನೆರವೇರಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ವಹಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ವಿಶ್ವ ಆರೋಗ್ಯ ಸಂಸ್ಥೆ,ಮಂಗಳೂರು, ಕರ್ನಾಟಕ ಇದರ ವೈದ್ಯಕೀಯ ಸಲಹೆಗಾರರು ಡಾ. ಜೋಸ್ ಥಾಮಸ್ ಹಾಗೂ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಅಸ್ಪತ್ರೆಯ ಶ್ವಾಸ ಕೋಶ ತಜ್ಞರಾದ ಡಾ.ಪ್ರೀತಿರಾಜ್ ಬಲ್ಲಾಳ್ ಕ್ಷಯರೋಗ ನಿರ್ಮೂಲನೆ ಕುರಿತು ವಿಶೇಷ ಮಾಹಿತಿಯನ್ನು ನೀಡಿದರು. ಈ ಸಂದರ್ಭ ವೇದಿಕೆಯಲ್ಲಿ ಶ್ವಾಸ ಕೋಶ ಔಷಧ ವಿಭಾಗದ ಸಹಾಯಕ ಪ್ರಾದ್ಯಾಪಕರಾದ ಡಾ.ಅನಿರುದ್ಧ ಕಾಟಿಪಳ್ಳ, ಡಾ.ಸುಧಾ ರುದ್ರಪ್ಪ, ಡಾ.ಅಪೂರ್ವ ದೊರೆ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.

 

See also  ಮಂಗಳೂರಿನಲ್ಲಿ ತೃತೀಯ ಲಿಂಗಿಗಳಿಂದ ಯಕ್ಷಗಾನಕ್ಕೆ ಸಿದ್ಧತೆ, ಇತಿಹಾಸದಲ್ಲೇ ಮೊದಲು
  Ad Widget   Ad Widget   Ad Widget   Ad Widget   Ad Widget   Ad Widget   Ad Widget