ಕರಾವಳಿಕ್ರೈಂ

ಸುಳ್ಯ: ಬೈಕ್ ನಲ್ಲಿ ಬರುತ್ತಿದ್ದ ವೈದ್ಯ ವಿದ್ಯಾರ್ಥಿಗೆ ಗುದ್ದಿ ಕಾರು ಸಹಿತ ಚಾಲಕ ಪರಾರಿ..! ಕನಕಮಜಲಿನಲ್ಲಿ ಹಿಟ್ ಆ್ಯಂಡ್ ರನ್ ಕೇಸ್..!

ನ್ಯೂಸ್ ನಾಟೌಟ್ : ಇತ್ತೀಚಿನ ದಿನಗಳಲ್ಲಿ ಅಪಾಯಕಾರಿ ವಾಹನ ಚಾಲಕರ ಸಂಖ್ಯೆ ಹೆಚ್ಚಾಗುತ್ತಿದೆ. ಯದ್ವಾತದ್ವಾ ಗಾಡಿ ಓಡಿಸುವ ಮೂಲಕ ರಸ್ತೆಯಲ್ಲಿ ಸಂಚರಿಸುವ ಅಮಾಯಕರ ಜೀವಕ್ಕೆ ಕುತ್ತು ತರುತ್ತಿದ್ದಾರೆ. ಅಂತಹ ಒಂದು ಘಟನೆ ಸುಳ್ಯದ ಕನಕಮಜಲಿನ ಸಮೀಪ ನಡೆದಿದೆ. ಬೈಕ್ ನಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೈದ್ಯ ವಿದ್ಯಾರ್ಥಿಗೆ ಕಾರು ಚಾಲಕನೊಬ್ಬ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾನೆ.

ವೈದ್ಯ ವಿದ್ಯಾರ್ಥಿ ಪುತ್ತೂರಿನಿಂದ ಸುಳ್ಯಕ್ಕೆ ಬರುತ್ತಿದ್ದರು. ವಿರುದ್ಧ ದಿಕ್ಕಿನಿಂದ ಅಂದರೆ ಸುಳ್ಯದಿಂದ ಪುತ್ತೂರಿಗೆ ಹೋಗುತ್ತಿದ್ದ ಕಾರು ರಭಸದಿಂದ ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಕಾಲಿಗೆ ಬಲವಾದ ಏಟು ಬಿದ್ದಿದೆ. ಸದ್ಯ ಆತನನ್ನು ಸುಳ್ಯದ ಆಸ್ಪತ್ರೆಯಿಂದ ಮಂಗಳೂರಿಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Related posts

ಅಡ್ಕಾರು: ಕಾಂಗ್ರೆಸ್ ಹಿರಿಯ ನಾಯಕನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

34 ಲಕ್ಷ ರೂ. ದುರ್ಬಳಕೆ ಹಿನ್ನೆಲೆ ,ಪಿಡಿಒ ಸೇವೆಯಿಂದ ವಜಾ

ಕೊಡಗು: ಬೈಕ್ ಗುದ್ದಿ ಯುವಕ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ದುರಂತಕ್ಕೆ ನಾನೇ ಕಾರಣವೆಂದು ಬೈಕ್ ಸವಾರ ಆತ್ಮಹತ್ಯೆ..! ಇಲ್ಲಿದೆ ಮನಕಲಕೋ ಘಟನೆ