ನ್ಯೂಸ್ ನಾಟೌಟ್: ಸುಳ್ಯದ ತಹಶೀಲ್ದಾರ್ ಗ್ರೇಡ್ 2 ಮಂಜುನಾಥ್ ಅವರಿಗೆ ವರ್ಗಾವಣೆಯಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರವಾಗಿ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ್ ಕಾರ್ಯದರ್ಶಿ ಕಂದಾಯ ಇಲಾಖೆ ಮುಕ್ತಾರ್ ಪಾಷಾ ಹೆಚ್.ಜಿ ಆದೇಶದ ಪ್ರಕಾರವಾಗಿ ಇವರನ್ನು ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.