ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಆಲೆಟ್ಟಿಯ ಗುರುಂಪು ಎಂಬಲ್ಲಿ ಲಾರಿಯೊಂದು ಇನ್ನೊಂದು ವಾಹನಕ್ಕೆ ಸೈಡ್ ಕೊಡಲು ಹೋಗಿ ರಸ್ತೆ ಬದಿ ಹೂತು ಹೋದ ಘಟನೆ ಇದೀಗ ಸಂಭವಿಸಿದೆ.
ಪೈಪ್ ಲೈನ್ ಕಾಮಗಾರಿಗಾಗಿ ರಸ್ತೆ ಅಗೆದ ಕಾರಣ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಎದುರಿನಿಂದ ಬರುವ ವಾಹನಕ್ಕೆ ಸೈಡ್ ಕೊಡುವಾಗ ಚಕ್ರ ಮಣ್ಣಿನಲ್ಲಿ ಹೂತು ಹೋಗುವ ಪ್ರಸಂಗ ಈ ರಸ್ತೆಯಲ್ಲಿ ಸಾಮಾನ್ಯವಾಗಿದೆ. ಶೀಘ್ರ ಪೈಪ್ ಲೈನ್ ಕಾಮಗಾರಿ ಮುಗಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.