Latestಕೆವಿಜಿ ಕ್ಯಾಂಪಸ್‌

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ, ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಪರಿಸರ ಉಳಿಸಿ : ಡಾ. ಕೆ.ವಿ. ಚಿದಾನಂದ

215

ನ್ಯೂಸ್ ನಾಟೌಟ್ : ದಿನ ನಿತ್ಯದ ಬದುಕಿನಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ಮಿತಗೊಳಿಸಿ ಆದಷ್ಟು ಮರುಬಳಕೆಯ ವಸ್ತುಗಳನ್ನು ಉಪಯೋಗಿಸಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಪರಿಸರ ಸ್ವಚ್ಛವಾಗಿಡಲು ಎಲ್ಲರ ಸಹಕಾರ ಅಗತ್ಯ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ ಕೆ.ವಿ ಚಿದಾನಂದ ಅಭಿಪ್ರಾಯಪಟ್ಟರು.

ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶುಕ್ರವಾರ (ಜೂ. 13) ಆಯೋಜಿಸಿದ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ವೈಲ್ಡ್ ಲೈಫ್ ವಾರ್ಡನ್ ಭುವನೇಶ್ ಕೈಕಂಬ ಮಾತನಾಡಿ, ಪರಿಸರ ದಿನಾಚರಣೆಯ ಪ್ರಾಮುಖ್ಯತೆಯನ್ನು ವಿವರಿಸಿ ಜೂನ್‌ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಮಾನವ, ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ತನ್ನ ಅಗತ್ಯಗಳಿಗೆ ಪರಿಸರವನ್ನು ಅವಲಂಬಿಸಿದೆ. ಆದರೆ ಈಗ ಮಾನವನ ದುರಾಸೆಯಿಂದ ಪರಿಸರ ಕಲುಷಿತಗೊಂಡಿದೆ. ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್‌ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ನಾವೆಲ್ಲರೂ ಒಟ್ಟಾಗಿ ಪರಿಸರವನ್ನು ಉಳಿಸಿ ಬೆಳೆಸಿ ಸಂರಕ್ಷಿಸೋಣ ಎಂದರು.

ಕಾಲೇಜಿನ ಡೀನ್ ಡಾ.ನೀಲಾಂಬಿಕೈ ನಟರಾಜಾನ್ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬಳಿಕ ಕಾಲೇಜಿನ ಇಕೋ ಕ್ಲಬ್ ಸಂಯೋಜಕರಾದ ಡಾ.ವರುಣ್ ಭಾಸ್ಕರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಪೆತಾಲಜಿ ವಿಭಾಗ ಮುಖ್ಯಸ್ಥರು ಪ್ರೊ. ಡಾ ಸತ್ಯವತಿ ಆರ್ ಆಳ್ವ, ಪ್ರೊಫೆಸರ್ ಡಾ. ನವ್ಯ, ಕಮ್ಯುನಿಟಿ ಮೆಡಿಸಿನ್ ವಿಭಾಗ ಮುಖ್ಯಸ್ಥರು ಪ್ರೊ. ಡಾ ದಿನೇಶ್ ಪಿ. ವಿ, ಸಹ ಪ್ರಧ್ಯಾಪಕರು ಡಾ. ಅಪೂರ್ವ ದೊರೆ, ಎಮರ್ಜೆನ್ಸಿ ವಿಭಾಗದ ಡಾ. ಹೆರಾಲ್ಡ್ ಲೂಯಿಸ್, ಮಕ್ಕಳ ವಿಭಾಗ ಮುಖ್ಯಸ್ಥರು ಪ್ರೊ. ಡಾ ಸುಧಾ ರುದ್ರಪ್ಪ, ಕೆವಿಜಿ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್ ಪ್ರಾಂಶುಪಾಲರು ಬಿ ಎಂ. ಪ್ರೇಮ, ಕೆವಿಜಿ ಕಾಲೇಜ್ ಆಫ್ ನರ್ಸಿಂಗ್ ಪ್ರಾಂಶುಪಾಲರು ಚಂದ್ರಾವತಿ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು. ಪರಿಸರ ದಿನಾಚರಣೆಯ ಅಂಗವಾಗಿ ಗಣ್ಯರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಳಿಕ ಕಾರ್ಯಕ್ರಮದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ತೃತೀಯ ಎಮ್. ಬಿ. ಬಿ ಎಸ್ ವಿದ್ಯಾರ್ಥಿ ರಕ್ಷಿತಾ ಪ್ರಾರ್ಥಿಸಿದರು. ಇಕೋ ಕ್ಲಬ್ ಕಾರ್ಯದರ್ಶಿ ಚೇತನ್ ಎಮ್ ಸ್ವಾಗತಿಸಿದರು. ಪ್ರಥಮ ಎಮ್. ಬಿ. ಬಿ. ಎಸ್ ವಿದ್ಯಾರ್ಥಿ ಶ್ರದ್ಧಾ ನಿರೂಪಿಸಿದರು. ದಿವ್ಯಾ ಬಿ ವಂದಿಸಿದರು. ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

  Ad Widget   Ad Widget   Ad Widget   Ad Widget   Ad Widget   Ad Widget   Ad Widget