ಕರಾವಳಿಕೊಡಗುಸುಳ್ಯ

ಸುಳ್ಯ : ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ,ಮನೆಯಲ್ಲಿ ಯಾರೂ ಇಲ್ಲದ ವೇಳೆ ದುರಂತ

223

ನ್ಯೂಸ್ ನಾಟೌಟ್ : ವ್ಯಕ್ತಿಯೊಬ್ಬರು ನೇಣು ಬಿಗಿದುಕೊಮಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿಯಿಂದ ವರದಿಯಾಗಿದೆ. ಎ.20ರಂದು ಸಂಜೆ ವೇಳೆ ಈ ದುರ್ಘಟನೆ ಬೆಳಕಿಗೆ ಬಂದಿದ್ದು, ಪಡ್ಪಿನಂಗಡಿ (ಕಜ್ಜೋಡಿ ತುಪ್ಪದ ಮನೆ) ಸುಬ್ಬಪ್ಪ ಗೌಡ(60) ಮೃತ ವ್ಯಕ್ತಿ.

ಮನೆಯ ಹಿಂಬದಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು,ಸಂಜೆ ವೇಳೆ ಈ ವಿಷಯ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುರಂತ ಸಂಭವಿಸಿದೆ.ಸ್ಥಳಕ್ಕೆ ಬೆಳ್ಳಾರೆ ಪೋಲೀಸರು ಆಗಮಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೃತರು ಪತ್ನಿ ಶ್ರೀಮತಿ ಕಮಲ, ಪುತ್ರಿ ಶ್ರೀಮತಿ ಹರಿಣಾಕ್ಷಿ ಹರೀಶ್, ಮೊಮ್ಮಗಳು ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.

See also  ಅನೈತಿಕ ವೇಶ್ಯಾವಾಟಿಕೆ ದಂಧೆ, ಮಹಿಳೆ ಸಹಿತ ನಾಲ್ವರು ಸೆರೆ, ಓರ್ವ ಪರಾರಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget