ನ್ಯೂಸ್ ನಾಟೌಟ್: ಆಟೋ ರಿಕ್ಷಾವೊಂದರಲ್ಲಿ ತೆರಳುತ್ತಿದ್ದ ಯುವಕನನ್ನು ತಡೆದು ನಿಲ್ಲಿಸಿ ಯುವಕರ ಗುಂಪೊಂದು ಸುಳ್ಯದ ಅಮರಮುಡ್ನೂರು ಗ್ರಾಮದ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ಘಾಸಿಗೊಳಿಸಿರುವ ಪ್ರಕರಣ ಮಂಗಳವಾರ (ಫೆ.13) ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ಯುವಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾನೆ.
ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಘಟನೆ..? ಅಮರಮುಡ್ನೂರು ಗ್ರಾಮದ ಸುಳ್ಯ ನಿವಾಸಿ ಅಜಿತ್ (21 ವರ್ಷ) ಮಂಗಳವಾರ ಸಂಜೆ ಜಯರಾಮ ಎಂಬುವವರ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅಜ್ಜಾವರ ಮುಖ್ಯ ರಸ್ತೆಯಲ್ಲಿರುವ ಕಾಟಿಪಳ್ಳ ಎಂಬಲ್ಲಿ ತಲುಪಿದಾಗ ಅಜ್ಜಾವರ ಗ್ರಾಮದ ಸುಳ್ಯ ನಿವಾಸಿಗಳಾದ ದಿನೇಶ್ (45 ), ಪುರುಷೋತ್ತಮ ( 32 ) ಹಾಗೂ ಸನತ್ ( 25 ) ಎಂಬುವವರು ಆಟೋ ರಿಕ್ಷಾವನ್ನು ತಡೆದು ನಿಲ್ಲಿಸಿ ಅಜಿತ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಆಟೋ ಚಾಲಕ ಜಯರಾಮ್ ಹಲ್ಲೆ ನಡೆಸುವವರನ್ನು ತಡೆಯಲು ಪ್ರಯತ್ನಿಸಿದಾಗ ಅವರನ್ನೂ ಬೆದರಿಸಿರುತ್ತಾರೆ. ಈ ಬಗ್ಗೆ ಸನತ್ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಸುಳ್ಯ ಪೊಲೀಸರು ಅ.ಕ್ರ ನಂ: 23/2024 ಕಲಂ: 341.323.324. 506 R/W 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.