ಕರಾವಳಿಸುಳ್ಯ

ಸುಳ್ಯ: ಚಂದ್ರಶೇಖರ ಬಿಳಿನೆಲೆ , ಡಾ. ಅನುರಾಧಾ ಕುರುಂಜಿ ದಂಪತಿಗೆ “ವಿಶ್ವ ಜ್ಞಾನಶ್ರೀ ” ಪುರಸ್ಕಾರ

150

ನ್ಯೂಸ್‌ ನಾಟೌಟ್‌ : ಸುಳ್ಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವಿವಿಧ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಚಂದ್ರಶೇಖರ ಬಿಳಿನೆಲೆ ಹಾಗೂ ಡಾ. ಅನುರಾಧಾ ಕುರುಂಜಿ ದಂಪತಿಗಳಿಗೆ ಬೆಳಗಾವಿಯ ಕಸ್ತೂರಿ ಸಿರಿಕನ್ನಡ ವೇದಿಕೆ ಕೊಡ ಮಾಡುವ ವಿಶ್ವ ಜ್ಞಾನಶ್ರೀ ಪುರಸ್ಕಾರ ಲಭಿಸಿದೆ.

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಗೌರವ ಪುರಸ್ಕಾರ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ನೀಡಲಾಯಿತು. ದಂಪತಿಯಿಬ್ಬರು ವ್ಯಕ್ತಿತ್ವ ವಿಕಸನ ತರಬೇತುದಾರರಾಗಿದ್ದು, ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಂಡಿರುವುದಲ್ಲದೆ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲೂ ಕಾರ್ಯನಿರ್ವಹಿಸುತ್ತಿದ್ದಾರೆ.

ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಬೋಧಕರಾಗಿರುವ ಚಂದ್ರಶೇಖರ ಬಿಳಿ ನೆಲೆಯವರಿಗೆ ವ್ಯಕ್ತಿತ್ವ ವಿಕಸನ ಕ್ಷೇತ್ರದಲ್ಲಿ ಹಾಗೂ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿರುವ ಡಾ. ಅನುರಾಧಾ ಕುರುಂಜಿಯವರಿಗೆ ಸಾಮಾಜಿಕ ಕ್ಷೇತ್ರದಲ್ಲಿ ಪ್ರಶಸ್ತಿ ನೀಡಲಾಗಿದೆ.

See also  ಪೆರಾಜೆ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರ ಆಯ್ಕೆ, ಶಕ್ತಿ ಕೇಂದ್ರದ ಸಭೆಯಲ್ಲಿ ರಚನೆಯಾದ ಹೊಸ ತಂಡದಲ್ಲಿ ಯಾರೆಲ್ಲ ಇದ್ದಾರೆ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget