ಕರಾವಳಿಸುಳ್ಯ

ಸುಳ್ಯ :ಉಚಿತ ಕಂಪ್ಯೂಟರ್ ತರಬೇತಿ ತರಗತಿ ಉದ್ಘಾಟನೆ-ಅತಿಥಿಗಳಿಂದ ಶುಭ ಹಾರೈಕೆ

209

ನ್ಯೂಸ್ ನಾಟೌಟ್ : ಒಂದು ತಿಂಗಳ ಉಚಿತ ಕಂಪ್ಯೂಟರ್ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ಇಂದು ಸುಳ್ಯದ ಶ್ರೀಹರಿ ಬಿಲ್ಡಿಂಗ್ ನ ಜ್ಞಾನಶ್ರೀ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ನಡೆಯಿತು.ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ – ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇದರ ವತಿಯಿಂದ ಕಾರ್ಯಕ್ರಮ ನಡೆಯಿತು.

ಸುಳ್ಯ ರೈತ ಉತ್ಪಾದಕರ ಕಂಪೆನಿ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.ಬ್ಯಾಂಕ್ ಆಫ್ ಬರೋಡ ಸುಳ್ಯ ಶಾಖೆಯ ವ್ಯವಸ್ಥಾಪಕ ಅಶೋಕ್ ವಿಮಾನ್, ಜ್ಞಾನಶ್ರೀ ಕಂಪ್ಯೂಟರ್ ತರಬೇತಿ ಕೇಂದ್ರದ ನಿರ್ದೇಶಕ ವೇಣುಗೋಪಾಲ ಬೆಟ್ಟಂಪಾಡಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಂಪ್ಯೂಟರ್ ನ ಅವಶ್ಯಕತೆ ಬಗ್ಗೆ ಮಾತನಾಡಿ ಉಚಿತ ಕಂಪ್ಯೂಟರ್ ತರಬೇತಿ ತರಗತಿಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡದರು.

ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಜ್ಞಾನಶ್ರೀ ಸಂಸ್ಥೆಯ ವಿದ್ಯಾರ್ಥಿನಿ ತ್ರಿವಿಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.ಪ್ರೀಮಾ ವಂದಿಸಿದರು.

See also  ಸುಳ್ಯದ ವಿವಾಹಿತ ಮಹಿಳೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಪ್ರಕರಣ, ಗಂಡ ಸೇರಿದಂತೆ 5 ಮಂದಿಗೆ ನ್ಯಾಯಾಂಗ ಬಂಧನ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget