ಕರಾವಳಿಸುಳ್ಯ

ಸುಳ್ಯ:ಪಿಲಿಕಜೆಯಲ್ಲಿ NMCಯ ಎನ್.ಎಸ್.ಎಸ್. ವಿಶೇಷ ಶಿಬಿರ ಸಮಾರೋಪ ಸಮಾರಂಭ, ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ಸಮಯ ಪ್ರಜ್ಞೆಯನ್ನು ಎನ್.ಎಸ್.ಎಸ್‌. ಕಲಿಸುತ್ತದೆ – ಡಾ. ಕೆ.ವಿ. ಚಿದಾನಂದ

175

ನ್ಯೂಸ್ ನಾಟೌಟ್:ಮಾರ್ಚ್ 10ರಂದು ಉದ್ಘಾಟನೆಗೊಂಡಿದ್ದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಇಂದು ನಡೆಯಿತು. ಇಂದು (ಮಾ. 16ರಂದು) ಅಮರ ಮುಡ್ನೂರು ಗ್ರಾಮದ ಪಿಲಿಕಜೆಯಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಆಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ)ಇದರ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ವಹಿಸಿದ್ದರು.

ಈ ವೇಳೆ ಮಾತನಾಡಿದ ಅವರು “ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ವಿದ್ಯಾರ್ಥಿಗಳಲ್ಲಿ ಹೊಸ ಜೀವನವನ್ನು ರೂಪಿಸುತ್ತದೆ. ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ಸಮಯ ಪ್ರಜ್ಞೆಯನ್ನು ಶಿಬಿರಾರ್ಥಿಗಳು ತಮ್ಮ ಜೀವನದಲ್ಲಿಯೂ ಅಳವಡಿಸಿಕೊಳ್ಳುತ್ತಿದ್ದಾರೆ. ಪ್ರಪಂಚದ ನಾನಾ ದೇಶಗಳಲ್ಲಿ ಸುಳ್ಯದ ಎನ್.ಎಂ.ಸಿ. ಮತ್ತು ಕೆವಿಜಿಯ ಇತರೆ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ವಿವಿಧ ಹುದ್ದೆಯನ್ನು ಅಲಂಕರಿಸಿದ್ದು, ಸುಳ್ಯದ ಹೆಸರು ವಿಶ್ವದೆಲ್ಲೆಡೆ ಪಸರಿಸುತ್ತಿದ್ದಾರೆ.ಈ ಭಾಗದಲ್ಲಿ ಇಂತಹ ಶಿಬಿರ ಇನ್ನೂ ನಡೆಯಲಿ ಎಂಬ ಅಭಿಪ್ರಾಯವನ್ನು ಊರವರು ಹೇಳಿದಾಗ ಶಿಬಿರಾರ್ಥಿಗಳು, ಶಿಬಿರಾಧಿಕಾರಿಗಳು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ ಅನ್ನೋದಕ್ಕೆ ಸಾಕ್ಷಿಯಾಗಿದೆ ಎಂದು ಎಂದು ಹೇಳಿದರು.

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಸಮಾರೋಪ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ, ಕುಕ್ಕುಜಡ್ಕ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಕೇಶವ ಗೌಡ ಕರ್ಮಜೆ, ಪ್ರಗತಿಪರ ಕೃಷಿಕ ಆನೆಕಾರ ಗಣಪಯ್ಯ, ಅಮರ ಮುಡ್ನೂರು ಗ್ರಾ.ಪಂ‌. ಸದಸ್ಯೆ ಶ್ರೀಮತಿ ದಿವ್ಯಾ ಕೆ, ಚೊಕ್ಕಾಡಿ ಗರುಡ ಯುವಕ ಮಂಡಲದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್ ಪಡ್ಪು, ಸುಳ್ಯ ಯುವಜನ ಸಂಯುಕ್ತ ಮಂಡಳಿ ಗೌರವಾಧ್ಯಕ್ಷ ತೇಜಸ್ವಿ ಕಡಪಾಲ, ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ಅನಿಲ್ ಪೂಜಾರಿಮನೆ ಮತ್ತು ಪ್ರಗತಿಪರ ಕೃಷಿಕರಾದ ಶಿವಸಾಯಿ ಭಟ್ ಪಿಲಿಕಜೆ ಅತಿಥಿಗಳಾಗಿ ಭಾಗವಹಿಸಿದ್ದರು. ಕೆ.ವಿ.ಜಿ. ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು, ಶ್ರೀ ಧರ್ಮಶಾಸ್ತಾ ಭಜನಾ ಮಂದಿರದ ಕಾರ್ಯಾಧ್ಯಕ್ಷ ಗಣೇಶ್ ಪಿಲಿಕಜೆ, ಡಿ.ಸಿ.ಸಿ. ಬ್ಯಾಂಕ್ ಮಂಗಳೂರು ಮಾರಾಟಾಧಿಕಾರಿ ಆದರ್ಶ ಬೊಳ್ಳೂರು, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕ ಪ್ರವೀಣ್ ಜಯನಗರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರಾಧಿಕಾರಿಗಳಾದ ಶ್ರೀಮತಿ ಚಿತ್ರಲೇಖ ಕೆ.ಎಸ್. ಸ್ವಾಗತಿಸಿ, ಶಿಬಿರದ ನಾಯಕ ಪ್ರಸಾದ್ ವಂದಿಸಿದರು. ಕು. ಚೈತನ್ಯ ಎಂ. ಕಾರ್ಯಕ್ರಮ ನಿರೂಪಿಸಿದರು. ಶಿಬಿರದ ನಾಯಕರುಗಳಾದ ಕೀರ್ತನ್ ಡಿ, ದೀಪ್ತಿ ಎ.ಎನ್, ಪ್ರಸಾದ್ ಕೆ.ಎನ್ ಮತ್ತು ರಕ್ಷಿತಾ ಕೆ ವೇದಿಕೆಯಲ್ಲಿ ಆಸೀನರಾಗಿದ್ದರು. ಕು. ರಕ್ಷಿತಾ.ಕೆ ಶಿಬಿರದ ವರದಿ ವಾಚಿಸಿದರು. ಶಿಬಿರಾರ್ಥಿ ಚೇತಸ್ ಉಗ್ರಾಣಿ ವರದಿ ವಾಚಿಸಿದರು. ಗಣೇಶ್ ಪಿಲಿಕಜೆ, ಶಿಬಿರಾರ್ಥಿ ಆಶಿತಾ, ಕೀರ್ತನ್ ಶಿಬಿರದ ಅನುಭವಗಳನ್ನು ಹಂಚಿಕೊಂಡರು. ದೀಪ್ತಿ ಎನ್. ಸ್ಪರ್ಧೆಗಳಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಊರಿನ 15 ಸಂಘಟನೆಗಳ ಪರವಾಗಿ, ಶ್ರೀ ಗಣೇಶೋತ್ಸವ ಸಮಿತಿ ಕುಕ್ಕುಜಡ್ಕ, ಶ್ರೀ ಧರ್ಮಶಾಸ್ತಾ ಭಜನಾ ಮಂದಿರ ಪಿಲಿಕಜೆ ಮತ್ತು ಕೆ.ವಿ.ಜಿ. ಆಡಳಿತ ಮಂಡಳಿ ಪರವಾಗಿ ಯುವಜನ ಸಂಯುಕ್ತ ಮಂಡಳಿ ಗೌರವಾಧ್ಯಕ್ಷ ತೇಜಸ್ವಿ ಕಡಪಾಲರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮುರಳಿ ನಳಿಯಾರು ತೇಜಸ್ವಿ ಕಡಪಾಲರ ಸನ್ಮಾನ ಪತ್ರ ವಾಚಿಸಿದರು. ಘಟಕದ ಶಿಬಿರಾಧಿಕಾರಿ ಸಂಜೀವ ಕುದ್ಪಾಜೆಯವರನ್ನು ಕೆ.ವಿ.ಜಿ. ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

  Ad Widget   Ad Widget   Ad Widget   Ad Widget   Ad Widget   Ad Widget   Ad Widget