Latest

ಸುಳ್ಯ:ಕೆವಿಜಿ ಕಾನೂನು ಕಾಲೇಜಿನಲ್ಲಿ ವಿಶೇಷ ಉಪನ್ಯಾಸ;ಇತ್ತೀಚಿನ ದಿನಗಳಲ್ಲಿ ಆಡಳಿತಾ ತ್ಮಕ ನ್ಯಾಯ ತೀರ್ಮಾನ ಅತ್ಯಂತ ಸೂಕ್ತ ಹಾಗೂ ಮಹತ್ವಪೂರ್ಣ:ಪ್ರೊ. ಕೆ.ವಿ. ದಾಮೋದರ ಗೌಡ

370

ನ್ಯೂಸ್ ನಾಟೌಟ್ : ಕೆವಿಜಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ವಿದ್ಯಾರ್ಥಿಗಳಿಗಾಗಿ ಆಡಳಿತಾತ್ಮಕ ನ್ಯಾಯ ತೀರ್ಮಾನ ವಿಷಯವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಆಡಳಿತಾಧಿಕಾರಿ, ನೆಹರು ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೆ ವಿ ದಾಮೋದರ ಗೌಡ, ” ಆಡಳಿತಾ ತ್ಮಕ ನ್ಯಾಯ ತೀರ್ಮಾನದ ಮಹತ್ವ, ಅಗತ್ಯತೆ, ಗುಣ ಮತ್ತು ಅವಗುಣಗಳ ಬಗ್ಗೆ ಉಪನ್ಯಾಸ ನೀಡಿದರು.

ಈ ವೇಳೆ ಪ್ರಚಲಿತ ವಿದ್ಯಮಾನದಲ್ಲಿ ಆಡಳಿತಾತ್ಮಕ ನ್ಯಾಯ ತೀರ್ಮಾನ ನ್ಯಾಯಾಂಗದ ಹೊರೆ, ಭಾರವನ್ನು ತಗ್ಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಹಾಗೂ ಈ ವ್ಯವಸ್ಥೆಯು ಇತ್ತೀಚಿನ ದಿನಗಳಲ್ಲಿ ಅತ್ಯಂತ ಸೂಕ್ತ ಮತ್ತು ಮಹತ್ವಪೂರ್ಣ ಎಂದು ತಿಳಿಸಿದರು. ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶದ ಸಂಯೋಜಕಿ ಸಮಾಜಶಾಸ್ತ್ರ ಉಪನ್ಯಾಸಕಿ ರಚನಾ.ಕೆ ಕಾರ್ಯಕ್ರಮ ಸಂಯೋಜಿಸಿದರು. ಕಾರ್ಯಕ್ರಮದ ಸಂಯೋಜಕರಾದ, ರಾಜ್ಯಶಾಸ್ತ್ರ ಉಪನ್ಯಾಸಕ ರಂಜನ್ ಕೆ ಎನ್ ಸ್ವಾಗತಿಸಿ, ವಂದಿಸಿದರು.ಕಾರ್ಯಕ್ರಮದಲ್ಲಿ ಭೋದಕ, ಭೋದಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

See also  ಮಾಜಿ ಪ್ರಿಯಕರನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ ಜೊತೆಗೊಂದು ಶಾಕ್ ನೀಡಿದ್ದಳು..! ಇಲ್ಲಿದೆ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget