ಕರಾವಳಿ

ಸುಳ್ಯ: ಮಲಗಿದ ಸ್ಥಿತಿಯಲ್ಲಿಯೇ ವ್ಯಕ್ತಿ ಮೃತ್ಯು

240

ನ್ಯೂಸ್ ನಾಟೌಟ್ : ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಮನೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.ಪದ್ಮನಾಭ ಮೃತ ದುರ್ದೈವಿ.

ಪದ್ಮನಾಭ ಅವರು ಅಣ್ಣ ಶೇಖರ ಪೂಜಾರಿ ಅವರ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಎ.3ರಿಂದ ತರಕಾರಿ ಅಂಗಡಿಯನ್ನು ಬಾಗಿಲು ಹಾಕಿಕೊಂಡು ತಮ್ಮ ಬಾಡಿಗೆ ಮನೆಗೆ ಹೋಗಿದ್ದರು ಎನ್ನಲಾಗಿದೆ. ಆದರೆ ಮರುದಿನ ಬೆಳಗ್ಗೆ ಅಂಗಡಿಯ ಬಾಗಿಲು ತೆರೆಯಲು ಬಾರದೇ ಇದ್ದುದರಿಂದ ಶೇಖರ ಅವರು ಪದ್ಮನಾಭ ಅವರಿಗೆ ಕಾಲ್ ಮಾಡಿದ್ದಾರೆ. ಕಾಲ್ ಸ್ವೀಕರಿಸದ ಕಾರಣ ಮನೆಯ ಹತ್ತಿರ ಹೋಗಿ ನೋಡಿದಾಗ ಬಾಗಿಲು ಹಾಕಿತ್ತು.ಕಿಟಕಿಯಿಂದ ನೋಡಿದಾಗ ಪದ್ಮನಾಭ ಮಂಚದ ಮೇಲೆ ಮಲಗಿದ ಸ್ಥಿತಿಯಲ್ಲಿದ್ದರು. ಬಾಗಿಲನ್ನು ಮುರಿದು ಒಳಗೆ ಹೋಗಿ ನೋಡಿದಾಗ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

See also  ಮಡಿಕೇರಿ –ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮತ್ತೆ ಅಡಚಣೆ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget