ಕರಾವಳಿಸುಳ್ಯ

ಸುಳ್ಯ: ವಿದ್ಯಾರ್ಥಿನಿ ಅನಾರೋಗ್ಯದಿಂದ ಹಠಾತ್‌ ಕೊನೆಯುಸಿರು,ಆಗಿದ್ದೇನು?

179

ನ್ಯೂಸ್ ನಾಟೌಟ್: ಹಠಾತ್ ಅನಾರೋಗ್ಯಕ್ಕೊಳಗಾಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ ಘಟನೆ ಸುಳ್ಯ ತಾಲೂಕಿನ ಎಡಮಂಗಲ ಗ್ರಾಮದಿಂದ ವರದಿಯಾಗಿದೆ.ತೃಪ್ತಿ ಬಾರದ ಲೋಕಕ್ಕೆ ತೆರಳಿದ ವಿದ್ಯಾರ್ಥಿನಿಯೆಂದು ತಿಳಿದು ಬಂದಿದೆ.

ಕಾಲೇಜ್‌ನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಈಕೆ ಕಳೆದ ಎರಡು ದಿನಗಳಿಂದ ಅನಾರೋಗ್ಯಕ್ಕೊಳಗಾಗಿದ್ದಳೆಂದು ತಿಳಿದು ಬಂದಿದೆ.ಎಡಮಂಗಲ ಗ್ರಾಮದ ಗಂಡಿತಡ್ಕ ರಾಮಚಂದ್ರ ನಾಯ್ಕ ಎಂಬವರ ಮಗಳು,ಸುಬ್ರಹ್ಮಣ್ಯ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು.

ಅನಾರೋಗ್ಯಕ್ಕೊಳಗಾದಾಗ ಕೂಡಲೇ ಜ.11ರಂದು ತೃಪ್ತಿಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ವೈದ್ಯರ ಸಲಹೆ ಮೇರೆಗೆ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ನಿನ್ನೆ (ಜ.11) ರಾತ್ರಿಯೇ ಉಸಿರು ಚೆಲ್ಲಿದ್ದಾಳೆಂದು ತಿಳಿದು ಬಂದಿದೆ.

See also  ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶ್ವಾಸಕೋಶ ದಿನಾಚರಣೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget