ದೇಶ-ಪ್ರಪಂಚರಾಜಕೀಯಸುಳ್ಯ

ಸುಳ್ಯ : ಕಾಂಗ್ರೆಸ್ ನಿಂದ ಉಚ್ಚಾಟನೆಗೊಂಡವರು ದೈವದ ಮೊರೆ ಹೋದ್ರು!,ಜಿ.ಕೃಷ್ಣಪ್ಪ ಅವರು ದೈವಸ್ಥಾನಕ್ಕೆ ಬಂದು ಪ್ರಮಾಣ ಮಾಡಲಿ..

ನ್ಯೂಸ್ ನಾಟೌಟ್:ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ. ಕೃಷ್ಣಪ್ಪರವರ ವಿರುದ್ಧ ಕಾಂಗ್ರೆಸ್ ಮುಖಂಡರು ದೈವದ ಮೊರೆ ಹೋಗಿದ್ದಾರೆ. ಮತದಾನ ಸಮಯದಲ್ಲಿ ತಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆನ್ನುವ ಆರೋಪದ ಹಿನ್ನಲೆಯಲ್ಲಿ ಉಚ್ಚಾನೆಗೊಂಡ ಕಾಂಗ್ರೆಸ್ ಮುಖಂಡರು ಕೋಡಿಂಬಾಳದ ಪ್ರಸಿದ್ಧ ಮಜ್ಜಾರು ಕ್ಷೇತ್ರಕ್ಕೆ ಆಗಮಿಸಿ ಹರಕೆ ಹೇಳಿದ್ದಾರೆಂದು ತಿಳಿದು ಬಂದಿದೆ.

ಕೋಡಿಂಬಾಳದ ಪ್ರಸಿದ್ಧ ಮಜ್ಜಾರು ರಾಜನ್ ದೈವದ ಸನ್ನಿಧಿಯಲ್ಲಿ ಹರಕೆ ಹೇಳಿದ್ದು,ತಮ್ಮನ್ನು ಪಕ್ಷದಿಂದ ಪಕ್ಷ ವಿರೋಧಿ ನೆಪ ಹೇಳಿ ಉಚ್ಛಾಟನೆ ಮಾಡಲಾಗಿದೆ.ಆದರೆ ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಜಿ.ಕೃಷ್ಣಪ್ಪ ಅವರ ಕುಮ್ಮಕ್ಕಿನಿಂದ ತಮ್ಮನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಹೇಳಿದ್ದಾರೆ. ಕೃಷ್ಣಪ್ಪ ಅವರು ದೈವಸ್ಥಾನಕ್ಕೆ ಬಂದು ಪ್ರಮಾಣ ಮಾಡಲಿ. ಅವರೇ ಪಕ್ಷವನ್ನು ಸೋಲಿಸಿ ನಮ್ಮ ಮೇಲೆ ಆಪಾದನೆ ಮಾಡುತ್ತಿದ್ದಾರೆ.ನಾವು ಇನ್ನೋರ್ವ ಅಭ್ಯರ್ಥಿ ನಂದಕುಮಾರ್ ಅವರನ್ನು ಬೆಂಬಲಿಸದಿರಲು ಅವರೇನು ಕಾಂಗ್ರೆಸ್ ಪಕ್ಷದ ವ್ಯಕ್ತಿಯಲ್ಲವೇ ಎಂದು ಈ ಸಂದರ್ಭ ಬೇಸರವನ್ನು ವ್ಯಕ್ತಪಡಿಸಿದರು.

ನಂದಕುಮಾರ್ ಅವರನ್ನು ಬೆಂಬಲಿಸಿದ್ದೇವೆ ಎನ್ನುವ ಕಾರಣದಿಂದ ನಮ್ಮನ್ನು ಪಕ್ಷ ವಿರೋಧಿಗಳು ಎಂದು ಹೇಳಲಾಗುತ್ತಿದೆ.ಕಡಬ ತಾಲೂಕಿನಲ್ಲಿ ಕಾಂಗ್ರೆಸ್ ಬಲಪಡಿಸಲು ನಾವು ಸತತವಾಗಿ ದುಡಿದಿದ್ದೇವೆ.ಪಕ್ಷಕ್ಕಾಗಿ ನಾವು ಹಗಲಿರುಳೆನ್ನದೆ ಕೆಲಸ ಮಾಡಿದ್ದೇವೆ ಎಂದು ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಸುಧೀರ್ ದೇವಾಡಿಗ,ಶ್ರೀಮತಿ ಉಷಾ ಅಂಚನ್,ಆಶಾ ಲಕ್ಷ್ಮಣ್ ಎಂಬವವರು ದೈವದ ಮೊರೆ ಹೋಗಿ ದೈವದ ಮುಂದೆ ಕಣ್ಣೀರಿಟ್ಟರು.

Related posts

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಫಿನ್ಲ್ಯಾಂಡ್ ಪ್ರಧಾನಿ! 5 ವರ್ಷದ ಮಗಳ ಬಗ್ಗೆ ಪ್ರಧಾನಿ ಹೇಳಿದ್ದೇನು?

ಮಹಾಕುಂಭ ಮೇಳದಲ್ಲಿ ವೈರಲ್ ಆದ ಸುಂದರಿ ಮೊನಾಲಿಸಾಗೆ ಭಾರಿ ಸಂಕಷ್ಟ..!ಆಕೆಯ ಸೌಂದರ್ಯವೇ ಆಕೆಗೆ ಮುಳುವಾಗಿ ಹೋಯ್ತಾ?

ಸುಳ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಅನಾಥ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನೆ, ತುರ್ತು ಸಂದರ್ಭದಲ್ಲಿ ಮಾನವೀಯ ಸಹಾಯ