ಉಡುಪಿಕರಾವಳಿಕ್ರೀಡೆಕ್ರೀಡೆ/ಸಿನಿಮಾವೈರಲ್ ನ್ಯೂಸ್

ಉಡುಪಿಯ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ಕೊಟ್ಟ ಸೂರ್ಯಕುಮಾರ್ ಯಾದವ್, ಟಿ20 ವಿಶ್ವಕಪ್ ಗೆದ್ದ ಖುಷಿಗೆ ದೇವಿಗೆ ವಿಶೇಷ ಪೂಜೆ

175

ನ್ಯೂಸ್ ನಾಟೌಟ್: ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್(Suryakumar Yadav) ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಇಂದು(ಜುಲೈ 9) ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಪತ್ನಿ ದೇವಿಶಾ ಶೆಟ್ಟಿ ಜೊತೆಗೆ ಮಾರಿಗುಡಿ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸ್ಟಾರ್ ಕ್ರಿಕೆಟರ್‌ಗೆ ಭವ್ಯ ಸ್ವಾಗತ ಕೋರಲಾಯಿತು. ನೂತನವಾಗಿ ನಿರ್ಮಾಣವಾಗುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದಂಪತಿ ಪೂಜೆ ಸಲ್ಲಿಸಿ, ದೇವಸ್ಥಾನದ ನಿರ್ಮಾಣ, ಕೆತ್ತನೆ ಶಿಲ್ಪಕಲೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಇಳಕಲ್ ಶಿಲೆಯಲ್ಲಿ ವಿಶಿಷ್ಟ ದೇವಾಲಯ ನಿರ್ಮಾಣವಾಗುತ್ತಿದೆ. ಇದಕ್ಕಾಗಿ ಸುಮಾರು 40 ಕೋಟಿ ರೂ. ವೆಚ್ಚ ಮಾಡಲಾಗಿದೆ. ಗರ್ಭಗುಡಿ, ಉಚ್ಚಂಗಿ ಗುಡಿ, ಸುತ್ತುಪೌಳಿ ಕಾಮಗಾರಿ ಶೇ.20 ಭಾಗ ಪೂರ್ಣವಾಗಿದೆ. ಮಾರ್ಚ್ 2 ರಂದು ಬ್ರಹ್ಮ ಕಲಶ ಮಹೋತ್ಸವ ಜರುಗಲಿದೆ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/07/one8-commune-pub-virat-kohili-kannada-news-bengaluru-fir
https://newsnotout.com/2024/07/mangaluru-theft-kannada-news-car-found-in-mulki-police-investigation
https://newsnotout.com/2024/07/russia-and-india-indians-are-free-from-russia-army-kannada-news-modi
See also  ಕರ್ನಾಟಕದ ರಾಜ್ಯಪಾಲರನ್ನೇ ಬಿಟ್ಟು ಹಾರಿದ ವಿಮಾನ, ಏರ್ ಪೋರ್ಟ್‌ಗೆ ಇನ್ ಟೈಮ್‌ಗೆ ತಲುಪಿದ್ದರೂ ಥಾವರ್ ಚಂದ್ ಗೆಹ್ಲೋಟ್‌ ಗೆ ವಿಮಾನ ತಪ್ಪಿದ್ದು ಹೇಗೆ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget