Latestರಾಜಕೀಯ

ಕಾಂಗ್ರೆಸ್‌ ಕಾರ್ಯಕರ್ತೆ ಹಿಮಾನಿ ಶವ ಸೂಟ್‌ಕೇಸ್‌ನಲ್ಲಿ ಪತ್ತೆ ಪ್ರಕರಣ,ಓರ್ವ ಶಂಕಿತ ಅರೆಸ್ಟ್

627

ನ್ಯೂಸ್‌ ನಾಟೌಟ್:  ʻಭಾರತ್ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (Himani Narwal) ಅವರ ಹತ್ಯೆ ಪ್ರಕರಣ ಇಡೀ ದೇಶದಲ್ಲಿಯೇ ಸಂಚಲನವನ್ನುಂಟು ಮಾಡಿದೆ. ಇದೀಗ ಇದಕ್ಕೆ ಸಂಬಂಧ ಪಟ್ಟ ಹಾಗೆ ಓರ್ವ ಶಂಕಿತನನ್ನ ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸ್‌ (Haryana Police) ಮೂಲಗಳು ತಿಳಿಸಿವೆ.

ಶಂಕಿತ ಆರೋಪಿಯಿಂದ ಹಿಮಾನಿ ನರ್ವಾಲ್ ನ ಮೊಬೈಲ್‌ ಹಾಗೂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತನನ್ನ ಬಹದ್ದೂರ್‌ಗಢ ನಿವಾಸಿಯಾಗಿದ್ದು, ಈತ ಹಿಮಾನಿಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ವರದಿಗಳು ತಿಳಿಸಿವೆ. ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿಯಿದ್ದ ಸೂಟ್‌ಕೇಸ್‌ನಲ್ಲಿ ಹಿಮಾನಿ ಶವ ಪತ್ತೆಯಾದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಹರಿಯಾಣ ಪೊಲೀಸ್‌ ಇಲಾಖೆ ತನಿಖೆಗಾಗಿ ವಿಶೇಷ ತಂಡವನ್ನ ರಚನೆ ಮಾಡಿತ್ತು.

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ʻಭಾರತ್ ಜೋಡೋʼಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (22) ಪಕ್ಷ ಚಟುವಟಿಕೆಯಲ್ಲಿ ಸಕ್ರೀಯರಾಗಿ ಕೆಲಸ ಮಾಡುತ್ತಿದ್ದರು.ಇವರ ಶವ ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಪತ್ತೆಯಾಗಿತ್ತು.ಈ ವೇಳೆ ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದರು.

ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದರು. ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾದಿಂದ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರೋಹ್ಟಕ್ ಪಿಜಿಐಎಂಎಸ್ ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

See also  ಸಾರ್ವಜನಿಕ ಶೌಚಾಲಯದಲ್ಲಿ ಗೋಣಿಚೀಲದೊಳಗೆ ಯುವತಿಯ ಶವ ಪತ್ತೆ..! 50 ಕ್ಕೂ ಹೆಚ್ಚು ಮಂದಿಯ ವಿಚಾರಣೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget