Latestಕ್ರೈಂರಾಜ್ಯವೈರಲ್ ನ್ಯೂಸ್ಶಿಕ್ಷಣ

ಶಿಕ್ಷಕರ ಒಳಜಗಳದಿಂದ ವಿದ್ಯಾರ್ಥಿಗಳಿಲ್ಲದೆ ಬಿಕೋ ಎನ್ನುತ್ತಿರುವ ಸರ್ಕಾರಿ ಶಾಲೆ..! ಪೋಷಕರ ಆರೋಪಗಳೇನು..?

554
Pc Cr: Public Tv

ನ್ಯೂಸ್ ನಾಟೌಟ್: ಶಿಕ್ಷಕರ ಒಳಜಗಳ ಹಾಗೂ ಸರಿಯಾಗಿ ಪಾಠ ಪ್ರವಚನ ನಡೆಯದ ಆರೋಪದ ಹಿನ್ನೆಲೆ ಚಾಮರಾಜನಗರ ತಾಲೂಕಿನ ಮರಿಯಾಲ ಸ.ಹಿ.ಪ್ರಾ.ಶಾಲೆಯಲ್ಲಿ ಯಾವುದೇ ವಿದ್ಯಾರ್ಥಿಗಳ ದಾಖಲಾತಿ ಆಗಿಲ್ಲ ಎನ್ನಲಾಗಿದೆ.

ಇಬ್ಬರು ಶಿಕ್ಷಕರು, ಇಬ್ಬರು ಅಡುಗೆ ಸಿಬ್ಬಂದಿ, ಏಳು ಕೊಠಡಿಗಳು ಇರುವ ಈ ಸರ್ಕಾರಿ ಶಾಲೆ ಯಾವುದೇ ವಿದ್ಯಾರ್ಥಿಗಳಿಲ್ಲದೇ ಬಿಕೋ ಎನ್ನುತ್ತಿದೆ. ಶಿಕ್ಷಕರ ಒಳ ಜಗಳ, ಸರಿಯಾಗಿ ನಡೆಯದ ಪಾಠ ಪ್ರವಚನ ಆರೋಪದಿಂದಾಗಿ ಶಾಲೆ ಆರಂಭವಾಗಿ ನಾಲ್ಕು ದಿನಗಳು ಕಳೆದರೂ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿಲ್ಲ. ಸರ್ಕಾರಿ ಶಾಲೆಗೆ ಪ್ರವೇಶ ಪಡೆಯದೇ ವಿದ್ಯಾರ್ಥಿಗಳು ಖಾಸಗಿ ಶಾಲೆಗಳತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.

ಸಮರ್ಪಕ ಬಿಸಿಯೂಟ ನೀಡಲ್ಲ, ಕುಡಿಯುವ ನೀರಿಲ್ಲ, ಸ್ವಚ್ಛತೆ ಇಲ್ಲ, ಶಿಕ್ಷಕರ ಜಗಳದಿಂದ ಶಾಲೆಯ ವಾತಾವರಣ ಹದಗೆಟ್ಟಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಕಳೆದ ವರ್ಷ 26 ವಿದ್ಯಾರ್ಥಿಗಳಿದ್ದರು. ಈ ಬಾರಿ ಬಹುತೇಕ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಿಗೆ ಪ್ರವೇಶ ಪಡೆದಿದ್ದಾರೆ. ಮೂರು ತಿಂಗಳ ಹಿಂದೆ ಮುಖ್ಯ ಶಿಕ್ಷಕಿ ಸುಶೀಲಾ ಪೊಲೀಸ್ ರಕ್ಷಣೆ ಪಡೆದಿದ್ದರು. ತಮ್ಮೂರ ಶಾಲೆಗೆ ನಿತ್ಯ ಪೊಲೀಸ್ ಕಾವಲಿನಿಂದ ಪೋಷಕರು ಬೇಸತ್ತಿದ್ದರು. ಸರ್ಕಾರಿ ಶಾಲೆಯ ದುರಾವಸ್ಥೆಯಿಂದ ಆಕ್ರೋಶಗೊಂಡು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಭಾಷೆ ಹುಟ್ಟಿದರ ಬಗ್ಗೆ ಮಾತನಾಡುವುದಕ್ಕೆ ನೀವು ಭಾಷಾ ತಜ್ಞರೇ? ಇಲ್ಲ ಇತಿಹಾಸಕಾರರೇ..? ಎಂದು ಕಮಲ್‌ ಗೆ ಹೈಕೋರ್ಟ್‌ ಪ್ರಶ್ನೆ..! ವಿಚಾರಣೆ ಮುಂದೂಡಿಕೆ..!

See also  ರಾತ್ರಿ ದೂರದಲ್ಲಿ ಗುಂಡಿ ಅಗೆಯುವುದು ಕಂಡು ಓಡಿದ ಗಸ್ತು ತಿರುಗಾಟದ ಪೊಲೀಸರು..! ಹತ್ತಿರ ಬಂದ ಪೊಲೀಸರಿಗೆ ಕಾದಿತ್ತು ಭಯಾನಕ ಶಾಕ್..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget