ಕರಾವಳಿಸುಳ್ಯ

ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುಗಳೆಡೆ ನಮ್ಮ ನಡೆ ಕಾರ್ಯಕ್ರಮ, ಸುಬ್ರಾಯ ಚೊಕ್ಕಾಡಿ ಮೆನೆಯಲ್ಲಿ ಕಸಾಪ ವತಿಯಿಂದ ಸಾಹಿತಿ ಶಿಕ್ಷಕರಿಗೆ ಗೌರವ ಸನ್ಮಾನ

ನ್ಯೂಸ್ ನಾಟೌಟ್ : ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುಗಳೆಡೆ ನಮ್ಮ ನಡೆ ಕಾರ್ಯಕ್ರಮ, ಸುಬ್ರಾಯ ಚೊಕ್ಕಾಡಿ ಮೆನೆಯಲ್ಲಿ ಕಸಾಪ ವತಿಯಿಂದ ಸಾಹಿತಿ ಶಿಕ್ಷಕರಿಗೆ ಗೌರವ ಸನ್ಮಾದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುಗಳೆಡೆ ನಮ್ಮ ನಡೆ ಕಾರ್ಯಕ್ರಮದಲ್ಲಿ ತಾಲೂಕಿನ ಹಿರಿಯ ಶಿಕ್ಷಕ-ಸಾಹಿತಿಗಳಾದ ಸುಬ್ರಾಯ ಚೊಕ್ಕಾಡಿ ಹಾಗೂ ಲಕ್ಷ್ಮೀಶ ಚೊಕ್ಕಾಡಿಯವರನ್ನು ಅವರ ನಿವಾಸಕ್ಕೆ ತೆರಳಿ ಗೌರವಿಸಲಾಯಿತು.

ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಿರಿಯ ಸಾಹಿತಿಗಳನ್ನು ಶಿಕ್ಷಕರ ದಿನಾಚರಣೆಯಂದು ಗೌರವಿಸುವ ವಿನೂತನ ಸಂಪ್ರದಾಯವನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆರಂಭಿಸಿದ್ದು ಚೊಕ್ಕಾಡಿಯಲ್ಲಿ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕವಿ-ಸಾಹಿತಿ-ಶಿಕ್ಫಕರಾದ ಸುಬ್ರಾಯ ಚೊಕ್ಕಾಡಿ ಹಾಗೂ ಲಕ್ಷ್ಮೀಶ ಚೊಕ್ಕಾಡಿಯ ನಿವಾಸದಲ್ಲಿ ಮನೆಯವರ ಸಮ್ಮುಖದಲ್ಲಿ ಹಿರಿಯ ಸಾಹಿತಿಗಳನ್ನು ಗೌರವಿಸಲಾಯಿತು. ಸುಬ್ರಾಯ ಚೊಕ್ಕಾಡಿಯವರು ಶಿಕ್ಷಕ ವೃತ್ತಿಯಿಂದ ನಿವೃತ್ತರಾಗಿ 25 ವರ್ಷಗಳಾಗಿದ್ದು 85ರ ಹರೆಯದಲ್ಲಿ ಇಂದಿಗೂ ಸಾಹಿತ್ಯ ಕಾಯಕ ಮುಂದುವರಿಸುತ್ತಿದ್ದಾರೆ.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು 10 ವರ್ಷಗಳ ಹಿಂದೆ ಶಿಕ್ಷಕ ವೃತ್ತಿಯಿಂದ ವಿರಮಿಸಿರುವ ಲಕ್ಷ್ಮೀಶ ಚೊಕ್ಕಾಡಿಯವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಕೂಡ ವಹಿಸಿದ್ದರು.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಎಲ್ಲರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರೊ.ಸಂಜೀವ ಕುದ್ಪಾಜೆ ಅಭಿನಂದನಾ ನುಡಿಗಳನ್ನಾಡಿದರು. ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ಧನ್ಯವಾದಗೈದರು.

ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಕೇಶವ.ಸಿ.ಎ,ಲತಾಶ್ರೀ ಸುಪ್ರೀತ್ ಮೋಂಟಡ್ಕ,ಜಿಲ್ಲಾ ಸಾಹಿತ್ಯ ಪರಿಷತ್ತಿನ ಸದಸ್ಯರಾದ ರಾಮಚಂದ್ರ ಪಲ್ಲತಡ್ಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಸುಬ್ರಾಯ ಚೊಕ್ಕಾಡಿ ಹಾಗೂ ಲಕ್ಷ್ಮೀಶ ಚೊಕ್ಕಾಡಿಯವರ ಮನೆಯವರು ಕಾರ್ಯಕ್ರಮದ ಆಯೋಜನೆಯಲ್ಲಿ ಸಹಕರಿಸಿದರು.

Related posts

ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದಾಗ ದುರಂತ,ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತ್ಯು

ಸುಳ್ಯ: ಚಲಿಸುತ್ತಿದ್ದ ಪಿಕಪ್ ಗೆ ನಿಯಂತ್ರಣ ತಪ್ಪಿ ಗುದ್ದಿದ ಸ್ಕೂಟಿ ಸವಾರ, ತಲೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲು

ಕುದ್ಮಾರು: ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ