ವೈರಲ್ ನ್ಯೂಸ್

‘ಮಾಡಬಾರದ ತಪ್ಪು ಮಾಡಿದ್ದೇನೆ,ಹಿಂದೆ ಮಾಡಿದ್ದ ತಪ್ಪನ್ನು ತಾನು ಮಾಡುವುದಿಲ್ಲ’..! ಭಗವಂತನಿಗೆ ಅರ್ಪಿಸಿದ ಭಕ್ತರ ಪತ್ರಗಳಲ್ಲಿ ಏನಿದೆ..? ಫಾರಿನ್ ಭಕ್ತರಿಂದಲೂ ಕಾಣಿಕೆ

ನ್ಯೂಸ್ ನಾಟೌಟ್ : ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಹಾಗೂ ಚಿಕ್ಕ ತಿರುಪತಿ ಎಂದೇ ಹೆಸರಾದ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ದೇವಾಯದ ಹುಂಡಿ ಎಣಿಕೆ ಬುಧವಾರ ನಡೆದಿದ್ದು ಭಕ್ತರು ಪತ್ರಗಳ ಮೂಲಕ ಭಗವಂತನಿಗೆ ಬಗೆ ಬಗೆಯ ಮೊರೆ ಇಟ್ಟಿದ್ದಾರೆ.
ಬುಧವಾರ ನಡೆದ ಹುಂಡಿ ಎಣಿಕೆ ವೇಳೆ 4-5 ಮಂದಿ ಭಕ್ತರು ಹಣದ ಜೊತೆಗೆ ಪತ್ರಗಳನ್ನು ಬಿಳಿಗಿರಿರಂಗನಾಥ ಸ್ವಾಮಿಗೆ ಅರ್ಪಣೆ ಮಾಡಿದ್ದಾರೆ. ಆಸ್ತಿ, ಧೈರ್ಯ, ಆರೋಗ್ಯ ಭಾಗ್ಯ, ಮಗನಿಗೆ ಒಳ್ಳೆಯ ಬುದ್ಧಿ ಕೊಡುವಂತೆ ಬಗೆ ಬಗೆಯ ಬೇಡಿಕೆಗಳನ್ನು ಭಕ್ತರು ಭಗವಂತನ‌ ಮುಂದೆ ಇಟ್ಟಿದ್ದಾರೆ.

ಭಕ್ತರೊಬ್ಬರು ಚೀಟಿಯೊಂದನ್ನು ಹುಂಡಿಗೆ ಹಾಕಿದ್ದು ಆಸ್ತಿ ವ್ಯಾಜ್ಯದ ಬಗ್ಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಕ್ಕ-ತಂಗಿಯರಿಗೆ ಆಸ್ತಿ ಸಿಗದಿರಲಿ- ಗಂಡು ಮಕ್ಕಳ ಪರವಾಗಿ ಕೋರ್ಟ್ ತೀರ್ಪು ಬರಲಿ, ಯಾವುದೇ ಕಾರಣಕ್ಕೂ ಹೆಣ್ಣು ಮಕ್ಕಳಿಗೆ ಆಸ್ತಿ ಆಗಬಾರದು ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ನು, ಮತ್ತೊಂದು ಪತ್ರದಲ್ಲಿ ಯುವಕನೋರ್ವ ಸಮಾಜದಲ್ಲಿ ಮುಖಂಡನಾಗಿ ಗುರುತಿಸಿಕೊಳ್ಳುವ ಆಸೆಯನ್ನು ಹೊರಹಾಕಿ ಗಮನ ಸೆಳೆದಿದ್ದಾನೆ.

ತನಗೆ ಮಾತನಾಡುವ ಧೈರ್ಯ ಕೊಡು, ನಮ್ಮ ಏರಿಯಾದಲ್ಲಿ ಗುರುತಿಸಿಕೊಳ್ಳುತ್ತೇನೆ. ಹಣ ಸಂಪಾದನೆ ಮಾಡುತ್ತೇನೆ. ಇಡೀ ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಲಿದ್ದು, ಏರಿಯಾದಲ್ಲಿ ಎಲ್ಲರ ಮುಂದೆ ಮಾತನಾಡಲು ಧೈರ್ಯ ಕೊಡು ಎಂದು ದೇವರ ಬಳಿ ತನ್ನ ಆಸೆ ಹೊರಹಾಕಿದ್ದಾನೆ.
ಮತ್ತೊಂದು ಪತ್ರದಲ್ಲಿ ತಾಯಿಯೊಬ್ಬರು ಬರೆದಿದ್ದು ಮಗನಿಗೆ ಒಳ್ಳೆಯ ಬುದ್ಧಿ ಕೊಡಲಿ, ತನ್ನನ್ನು ಬೈಯ್ಯದಿರಲಿ, ಹಿಂದೆ ಮಾಡಿದ್ದ ತಪ್ಪನ್ನು ತಾನು ಮಾಡುವುದಿಲ್ಲ. ಆರೋಗ್ಯ ಭಾಗ್ಯ ಕೊಡಲಿ ಎಂದು ಎರಡು ಪುಟಗಳ ದೀರ್ಘ ಪತ್ರ ಬರೆದು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ.

ಇನ್ನು ಬಿಳಿಗಿರಿರಂಗನಾಥನ ಹುಂಡಿ ಎಣಿಕೆಯಲ್ಲಿ 42,11,305 ಹಣ ಸಂಗ್ರಹವಾಗಿದ್ದು ವಿದೇಶಿ ಭಕ್ತರು ಕೂಡ ದೇವರಿಗೆ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿಯಲ್ಲಿ 132 ಅಮೇರಿಕನ್ ಡಾಲರ್, ನೇಪಾಳದ ಎರಡು ನೋಟುಗಳು, ಅರಬ್ ಎಮಿರೇಟ್ಸ್ ನ 10 ಧೀರಂ, ಆಫ್ರಿಕನ್‌ ಗಾಂಬಿಯಾದ 50 ರೂ. ನ ಒಂದು ನೋಟನ್ನು ಭಕ್ತರು ರಂಗನಾಥನಿಗೆ ಅರ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ.

Related posts

ಕ್ಯಾನ್ಸರ್ ಪೀಡಿತರಿಗಾಗಿ ಮಿಡಿದ ಪುಟ್ಟ ಹೃದಯ, ಸಂಪಾಜೆಯ ಬಾಲಕಿಗೊಂದು ಬಿಗ್ ಸೆಲ್ಯೂಟ್ ..!

ಬಿಜೆಪಿಗೆ ವಿರೋಧ ಪಕ್ಷದ ನಾಯಕರು ಬೇಕಾಗಿದ್ದಾರೆ..! ವೈರಲ್ ಪೋಸ್ಟ್‌ನಿಂದ ಬಿಜೆಪಿಗರಿಗೆ ಮುಜುಗರ..!

ದರ್ಶನ್ ಪ್ರಕರಣ: ಕೈದಿ ನಂಬರ್ ‘D 6106’ ಎಂದು ಹೇರ್ ಕಟಿಂಗ್‌ ಮಾಡಿಸಿಕೊಂಡ ಅಭಿಮಾನಿ..! ಇಲ್ಲಿದೆ ವೈರಲ್ ವಿಡಿಯೋ