ಕರಾವಳಿಪುತ್ತೂರು

ಜೆಸಿಬಿ ಮೇಲೆ ಮಣ್ಣು ಕುಸಿದು ಭೀಕರ ದುರಂತ,ಮಣ್ಣಲ್ಲಿ ಸಿಲುಕಿ ಚಾಲಕ ಮೃತ್ಯು

287

ನ್ಯೂಸ್ ನಾಟೌಟ್ : ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಸಂಭವಿಸಿದೆ.ಮಂಗಳೂರಿನ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ (22) ಮೃತರು.

ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್‌ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿತ್ತು. ಜೆಸಿಬಿಯ ಚಾಲಕ ಮಣ್ಣಲ್ಲಿ ಸಿಲುಕಿಕೊಂಡ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳೀಯರು ಹಾಗೂ ಎರಡು ಜೆಸಿಬಿ ಸಹಾಯದಿಂದ ಮಣ್ಣು ತೆಗೆಯಲು ಹರಸಾಹಸ ಮಾಡಲಾಯಿತು.ಆದರೆ ಅದಾಗಲೇ ಚಾಲಕ ಮೃತಪಟ್ಟಿದ್ದು,ಬದುಕಿಸಲಾಗಲಿಲ್ಲ.

See also  ಬಂಟ್ವಾಳ: 20 ಕಿ.ಮೀ ದೂರದಲ್ಲಿ ಕೋಮು-ಸಂಘರ್ಷ, ಮತ್ತೊಂದೆಡೆ ಕೋಮು ಸಾಮರಸ್ಯ..! ಹಬ್ಬದ ಮೆರವಣಿಗೆಯಲ್ಲಿ ಬಂದ ಮುಸ್ಲಿಮರಿಗೆ ಸಿಹಿ ಹಂಚಿ ಶುಭಾಶಯ ಕೋರಿದ ಹಿಂದೂಗಳು
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget