ದೇಶ-ವಿದೇಶ

ಬಾರಾಮುಲ್ಲಾ: ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ, 42 ವರ್ಷಗಳ ಬಳಿಕ ದೋಡಾಕ್ಕೆ ಪ್ರಧಾನಿ ಭೇಟಿ ಸಿದ್ಧತೆಯಲ್ಲಿರುವಾಗಲೇ ಉಗ್ರರ ಕುಕೃತ್ಯ

ನ್ಯೂಸ್ ನಾಟೌಟ್: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರರೊಂದಿಗೆ ಗುಂಡಿನ ಕಾಳಗ ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿವೆ. ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ಕೆಲ ಹೊತ್ತಿನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಅಪರಿಚಿತ ಉಗ್ರರ ಗುರುತು ಪತ್ತೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಜಮ್ಮು–ಕಾಶ್ಮೀರದ ಕಿಸ್ತವಾರ್ ಜಿಲ್ಲೆ ಚಾತ್ರೂ ಪ್ರದೇಶದಲ್ಲಿ ಉಗ್ರರೊಂದಿಗೆ ಶುಕ್ರವಾರ ನಡೆದ ಗುಂಡಿನ ಚಕಮಕಿಯಲ್ಲಿ ಜೂನಿಯರ್ ಕಮಿಷನ್ಡ್ ಅಧಿಕಾರಿ (ಜೆಸಿಒ) ಸೇರಿ ಸೇನೆಯ ಇಬ್ಬರು ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇತರ ಇಬ್ಬರು ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ (ವಿಧಾನಸಭೆ) ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಲಿದ್ದು, ದೋಡಾದಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 42 ವರ್ಷಗಳ ಬಳಿಕ ಪ್ರಧಾನಿಯೊಬ್ಬರು ದೋಡಾಗೆ ಭೇಟಿ ನೀಡುತ್ತಿರುವುದು ವಿಶೇಷ.

Related posts

ಈ ಜಿಲ್ಲೆಯಲ್ಲಿ10 ನೇ ಪಾಸಾದವರೂ ವೈದ್ಯರು..! ಆಕೆಯಿಂದ ಬಯಲಾಯ್ತು 384 ನಕಲಿ ವೈದ್ಯರ ದಂಧೆ..!

ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ..! ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆ..!

ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದಲ್ಲಿ ಸತ್ತ ಹಾವು ಪತ್ತೆ..! ವಿದ್ಯಾರ್ಥಿ ಮಾಡಿದ ಆ ಪೋಸ್ಟ್ ನಿಂದ ಎಚ್ಚೆತ್ತ ಡಿಸಿ..!