ನ್ಯೂಸ್ ನಾಟೌಟ್: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯದಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಥಾರ್ ಜೀಪು ಅಡ್ಕಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ತೋಟಕ್ಕೆ ಉರುಳಿ ಬಿದ್ದ ಘಟನೆ ಇದೀಗ ಸಂಭವಿಸಿದೆ.
ಘಟನೆಯಲ್ಲಿ ಜೀಪ್ನೊಳಗಿದ್ದವರಿಗೆ ಸಣ್ಣ ಪುಟ್ಟ ಗಾಯಗೊಂಡು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಿಂದ ಥಾರ್ ಜೀಪ್ ಮಗುಚಿ ಬಿದ್ದಿದ್ದು, ಮುಂಭಾಗ ಜಖಂಗೊಂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.