ಕರಾವಳಿಕ್ರೈಂ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವಿದೇಶದಲ್ಲಿ ಅಡಗಿ ಕುಳಿತ್ತಿದ್ದ ಆರೋಪಿ ಕೊನೆಗೂ ಬಂಧನ

305

ನ್ಯೂಸ್‌ ನಾಟೌಟ್‌: ಮಂಗಳೂರು ಗ್ರಾಮೀಣ ಭಾಗದಲ್ಲಿ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಬಜಾಲ್, ಫೈಜಲ್ ನಗರ ನಿವಾಸಿ ತೌಸೀಫ್(27) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ, ಪೊಲೀಸರಿಗೂ ಸಿಗದೆ ತಲೆಮರೆಸಿಕೊಂಡು ವಿದೇಶದಲ್ಲಿ ಅಡಗಿದ್ದ. ಆದ್ದರಿಂದ ಮಂಗಳೂರು ಗ್ರಾಮಾಂತರ ಪೊಲೀಸರು ಈತನ ವಿರುದ್ಧ ಲುಕ್ ಔಟ್ ನೋಟೀಸ್ ಹೊರಡಿಸಿದ್ದರು.

ಅಕ್ಟೋಬರ್ 14ರಂದು ಈತ ಸೌದಿ ಅರೇಬಿಯಾದಿಂದ ಮಂಗಳೂರಿಗೆ ಬರಲು ಮುಂಬೈಯ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ವೇಳೆ ಮುಂಬೈನ ಇಮಿಗ್ರೇಷನ್ ಅಧಿಕಾರಿಗಳು ಈತನ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿರುವ ಬಗ್ಗೆ ಖಚಿತಪಡಿಸಿ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ.

See also  Menstrual cup: 'ಮೈತ್ರಿ ಮುಟ್ಟಿನ ಕಪ್ ಯೋಜನೆ'ಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ;ಚಿತ್ರನಟಿ ಸಪ್ತಮಿ ಗೌಡ ಭಾಗಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget